Advertisement
ಸುದ್ದಿಗಳು

ಮಾನವಸಹಿತ ‘ಗಗನಯಾನ’​ ಮೊದಲ ಹಾರಾಟ ಪರೀಕ್ಷೆ ಅಕ್ಟೋಬರ್ 21ಕ್ಕೆ

Share

ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಮಾನವಸಹಿತ ಗಗನಯಾನ ಮಿಷನ್‌ನ ಮೊದಲ ಪರೀಕ್ಷಾರ್ಥ ಹಾರಾಟವನ್ನು ಅಕ್ಟೋಬರ್ 21 ರಂದು ನಡೆಸಲಿದೆ ಎಂದು ಸೋಮವಾರ ಇಸ್ರೋ ಮಾಹಿತಿ ನೀಡಿದೆ. ಚಂದ್ರಯಾನ, ಸೂರ್ಯಯಾನ ಯೋಜನೆಗಳ ಯಶಸ್ಸಿನ ಮೂಲಕ ನಭೋಮಂಡಲದಲ್ಲಿ ಇತಿಹಾಸ ನಿರ್ಮಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಈಗ ಮತ್ತೊಂದು ಮಹತ್ವದ ಯೋಜನೆಗೆ ಸಜ್ಜಾಗುತ್ತಿದೆ.

ಟಿವಿ-ಡಿ1 ಪರೀಕ್ಷಾ ಹಾರಾಟವನ್ನು ಅಕ್ಟೋಬರ್ 21 ರಂದು ಶ್ರೀಹರಿಕೋಟಾದ ಎಸ್‌ಡಿಎಸ್‌ಸಿ-ಎಸ್​ಎಚ್​ಎಆರ್​ನಿಂದ ಬೆಳಿಗ್ಗೆ 7 ರಿಂದ 9 ರವರೆಗೆ ನಿಗದಿಪಡಿಸಲಾಗಿದೆ. ಮಾನವಸಹಿತ ಗಗನಯಾನ ಯೋಜನೆಯ ಪರೀಕ್ಷಾರ್ಥ ಪ್ರಯೋಗವನ್ನು ನಡೆಸುವುದಾಗಿ ಇಸ್ರೋ ಇಂದು ಪ್ರಕಟಿಸಿದೆ. ಇದರಲ್ಲಿ ಮೂವರು ಗಗನಯಾತ್ರಿಗಳು ಹಾರಾಟ ನಡೆಸಲಿದ್ದಾರೆ ಎಂದು ಇಸ್ರೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿದೆ.

ಗಗನಯಾನದಲ್ಲಿ 3 ಸದಸ್ಯರ ತಂಡವನ್ನು 400 ಕಿಮೀ ಮೇಲಿನ ಭೂಕಕ್ಷೆಗೆ 3 ದಿನಗಳ ಕಾರ್ಯಾಚರಣೆಗಾಗಿ ಕಳುಹಿಸಲಾಗುತ್ತದೆ. ಇದಾದ ನಂತರ ಸಿಬ್ಬಂದಿ ಮಾಡ್ಯೂಲ್ ಅನ್ನು ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಸಲಾಗುತ್ತದೆ. ಭಾರತ ತನ್ನ ಈ ಉದ್ದೇಶದಲ್ಲಿ ಯಶಸ್ವಿಯಾದರೆ ಅದನ್ನು ಮಾಡಿದ ನಾಲ್ಕನೇ ರಾಷ್ಟ್ರವಾಗಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

1 day ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

1 day ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

2 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

2 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

3 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

3 days ago