ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.
ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.
ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…