Advertisement
ಸುದ್ದಿಗಳು

ಗೋವಾದಲ್ಲಿ 10 ನೇ ಶತಮಾನದ ಗಜಲಕ್ಷ್ಮಿ ಶಿಲ್ಪ ಪತ್ತೆ

Share

ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.

ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

11 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

12 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

14 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

14 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago