Advertisement
ಸುದ್ದಿಗಳು

ಗೋವಾದಲ್ಲಿ 10 ನೇ ಶತಮಾನದ ಗಜಲಕ್ಷ್ಮಿ ಶಿಲ್ಪ ಪತ್ತೆ

Share

ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.

ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 hours ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

11 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

11 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

11 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

11 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

12 hours ago