Advertisement
ಸುದ್ದಿಗಳು

ಗೋವಾದಲ್ಲಿ 10 ನೇ ಶತಮಾನದ ಗಜಲಕ್ಷ್ಮಿ ಶಿಲ್ಪ ಪತ್ತೆ

Share

ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.

ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

9 hours ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

10 hours ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

24 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

1 day ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

2 days ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

2 days ago