Advertisement
ಸುದ್ದಿಗಳು

ಗೋವಾದಲ್ಲಿ 10 ನೇ ಶತಮಾನದ ಗಜಲಕ್ಷ್ಮಿ ಶಿಲ್ಪ ಪತ್ತೆ

Share

ಕ್ರಿ.ಶ 10 ನೇ ಶತಮಾನಕ್ಕೆ ಸೇರಿದ ವಿಶಿಷ್ಟವಾದ ಗಜಲಕ್ಷ್ಮಿ ಶಿಲ್ಪವು ಗೋವಾದ ಸತ್ತಾರಿ ತಾಲೂಕಿನ ವಾಲ್ವಂತಿ ನದಿಯಲ್ಲಿ ಪತ್ತೆಯಾಗಿದೆ ಎಂದು ಉಡುಪಿನ ಆದಿಮೆ ಕಲಾ ಟ್ರಸ್ಟ್ ನ ಸಂಸ್ಥಾಪಕ ಟ್ರಸ್ಟಿ ಟಿ. ಮುರುಗೇಶಿ ತಿಳಿಸಿದ್ದಾರೆ. ಈ ಶಿಲ್ಪವು ಸುಮಾರು 50 ಸೆ.ಮೀ ಉದ್ದ ಮತ್ತು 61 ಸೆ.ಮೀ ಅಗಲವಿದೆ ಎಂದು ತಿಳಿಸಿದ್ದಾರೆ.

ಉನ್ನತವಾದ ಪದ್ಮಪೀಠದ ಮೇಲೆ, ಅಭಯ ಮತ್ತು ವರದ ಹಸ್ತೆಯಾಗಿ ಕುಳಿತಿರುವ ಲಕ್ಷ್ಮಿಯು ಹಿಂದಿನ ಬಲಗೈಯಲ್ಲಿ ಕಮಲದ ಮೊಗ್ಗು, ಹಿಂದಿನ ಎಡಗೈಯಲ್ಲಿಯೂ ಸಹ ಕಮಲದ ಮೊಗ್ಗನ್ನು ಹಿಡಿದಿದ್ದಾಳೆ. ಕಿವಿಯಲ್ಲಿ ಮಕರಕುಂಡಲಗಳಿವೆ, ಆಕರ್ಷಕ ಕರಂಡಮುಕುಟವನ್ನು ಧರಿಸಿದ ದೇವಿಯು ಮುಖದಲ್ಲಿ ದೈವೀಕಳೆಯ ವರ್ಚಸ್ಸು ಎದ್ದು ತೋರುತ್ತದೆ ಎಂದು ಹೇಳಿದ್ದಾರೆ.

Advertisement

ದೇವಿಯ ಹಿಂಭಾಗದಲ್ಲಿ ಅಂಡಾಕಾರದ ಪ್ರಭಾವಳಿಯಿದ್ದು, ಮಧ್ಯದಲ್ಲಿ ಸಿಂಹದ ಲಲಾಟ ಬಿಂಬವಿದೆ. ಕಂಠೀಹಾರ, ಕೊರಳಹಾರ, ಕೇಯೂರ, ಮುಂತಾದ ಆಭರಣಗಳಿಂದ ಅಲಂಕೃತಳಾದ ಲಕ್ಷ್ಮಿಯ ಎಡ-ಬಲಗಳಲ್ಲಿ ಪವಿತ್ರ ಕಳಸಗಳನ್ನು ಹಿಡಿದಿರುವ ಎರಡು ಆನೆಗಳಿವೆ. ಪೀಠದ ಮಧ್ಯಭಾಗದಲ್ಲಿ ಗಂಡಭೇರುಂಡದ ಲತಾಕೋಷ್ಟಕವಿದೆ. ಶಿಲ್ಪವು ಸುಮಾರು 10ನೇ ಶತಮಾನದ ಶಿಲ್ಪಶೈಲಿಯಲ್ಲಿದ್ದು, ಗೋವಾ ಕದಂಬರ ಶಿಲ್ಪಶೈಲಿಯ ಉತ್ತಮ ಉದಾಹರಣೆಯಾಗಿದೆ. ಈ ಶಿಲ್ಪವು 50 ಸೆ.ಮೀ. ಎತ್ತರ ಹಾಗೂ 61 ಸೆ.ಮೀ. ಅಗಲವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

13 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

14 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

1 day ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

2 days ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

2 days ago