(ಚಿತ್ರಕೃಪೆ - ಇಂಟರ್ನೆಟ್ )
ಯಕ್ಷಗಾನ ಕಲೆಯ ಪೋಷಣೆ ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ ಕಲಾವಿದರನ್ನೂ ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.30 ರಂದು ಮಧ್ಯಾಹ್ನ 2.30 ರಿಂದ “ಗಾನಾರ್ಚನೆ” ನಡೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಭಾಗವಹಿಸಲಿದ್ದು ಚೆಂಡೆಯಲ್ಲಿ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಕೃಷ್ಣಪ್ರಕಾಶ್ ಉಳಿತ್ತಾಯ, ಚಕ್ರತಾಳದಲ್ಲಿ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸುವರು. ಹರೀಶ್ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಗೋವಿಂದ ಭಾಗವಹಿಸುವರು. ಯಕ್ಷಗಾನ ಸಂಘಟಕ ಮತ್ತು ವಿಮರ್ಶಕ ಎಸ್ ಎನ್ ಪಂಜಾಜೆ ಗೌರವ ಉಪಸ್ಥಿತರಿರುವರು.
ವಿಶೇಷ ಆಕರ್ಷಣೆಯಲ್ಲಿ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಅವರ ವಿಭಿನ್ನ ಶೈಲಿಯ ಹಾಡುಗಾರಿಕೆಯು ಗಮನ ಸೆಳೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…