(ಚಿತ್ರಕೃಪೆ - ಇಂಟರ್ನೆಟ್ )
ಯಕ್ಷಗಾನ ಕಲೆಯ ಪೋಷಣೆ ಹಾಗೂ ಕಲಾರಾಧನೆಯ ಸತ್ಕಾರ್ಯದೊಂದಿಗೆ ಕಲಾವಿದರನ್ನೂ ಪೋಷಿಸುವ ಸಾಮಾಜಿಕ ಕಳಕಳಿಯೊಂದಿಗೆ ಯಕ್ಷಕಲಾಭಿಮಾನಿ ಮಿತ್ರರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಅ.30 ರಂದು ಮಧ್ಯಾಹ್ನ 2.30 ರಿಂದ “ಗಾನಾರ್ಚನೆ” ನಡೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.
ಕಾರ್ಯಕ್ರಮದಲ್ಲಿ ಯಕ್ಷಗಾನ ಪ್ರಸಿದ್ಧ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಭಾಗವಹಿಸಲಿದ್ದು ಚೆಂಡೆಯಲ್ಲಿ ಸುಬ್ರಹ್ಮಣ್ಯ ದೇಲಂತಮಜಲು, ಮದ್ದಳೆಯಲ್ಲಿ ಕೃಷ್ಣಪ್ರಕಾಶ್ ಉಳಿತ್ತಾಯ, ಚಕ್ರತಾಳದಲ್ಲಿ ಪುರುಷೋತ್ತಮ ಆಚಾರ್ಯ ದುಗ್ಗಲಡ್ಕ ಭಾಗವಹಿಸುವರು. ಹರೀಶ್ ಬಳಂತಿಮೊಗ್ರು ಕಾರ್ಯಕ್ರಮ ನಿರೂಪಣೆ ಮಾಡುವರು. ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಕೆ ಎಸ್ ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಗೋವಿಂದ ಭಾಗವಹಿಸುವರು. ಯಕ್ಷಗಾನ ಸಂಘಟಕ ಮತ್ತು ವಿಮರ್ಶಕ ಎಸ್ ಎನ್ ಪಂಜಾಜೆ ಗೌರವ ಉಪಸ್ಥಿತರಿರುವರು.
ವಿಶೇಷ ಆಕರ್ಷಣೆಯಲ್ಲಿ ಭಾಗವತರುಗಳಾದ ಮುರಳಿಕೃಷ್ಣ ಶಾಸ್ತ್ರಿ ತೆಂಕಬೈಲು, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಅವರ ವಿಭಿನ್ನ ಶೈಲಿಯ ಹಾಡುಗಾರಿಕೆಯು ಗಮನ ಸೆಳೆಯಲಿದೆ ಎಂದು ಯಕ್ಷಕಲಾಭಿಮಾನಿ ಮಿತ್ರರ ಪ್ರಕಟಣೆ ತಿಳಿಸಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…