Advertisement
ಅಂಕಣ

#ನಮ್ಮೊಳಗಿನಗಾಂಧಿ | ಗಾಂಧಿ ಎಂದರೆ ಅದು ವ್ಯಕ್ತಿಯಲ್ಲ … ಅದೊಂದು ಚಿಂತನೆ | ನಮ್ಮೊಳಗಿನ ಗಾಂಧಿ ಈಗ ಎದ್ದು ಬರಲು ಸಮಯ |

Share

ಗಾಂಧಿ ಜಯಂತಿ. ಇದು ವ್ಯಕ್ತಿಯ ಆರಾಧನೆಯಲ್ಲ, ಇದೊಂದು ಚಿಂತನೆಯ ಆರಾಧನೆ. ಈ ಚಿಂತನೆ ಸಾರ್ವಕಾಲಿಕ ಸತ್ಯ.

Advertisement
Advertisement

ಈ ದೇಶದಲ್ಲಿ  ಮಹಾನ್‌ ರಾಷ್ಟ್ರಪುರುಷ ಹುಟ್ಟಿದ್ದು ಮಾತ್ರವಲ್ಲ ಇಡೀ ಜಗತ್ತಿಗೆ ಸತ್ಯ, ಧರ್ಮ, ನ್ಯಾಯದ ಸಂದೇಶವನ್ನು ಸಾರಿ ರಾಷ್ಟ್ರಪಿತ ಎನಿಸಿಕೊಂಡ ಮಹಾನ್‌ ಚೇತನ. ಹೀಗಾಗಿಯೇ ಭಾರತ ಸರ್ವಶ್ರೇಷ್ಟ ಎನಿಸಿಕೊಳ್ಳಲು ಇಂತಹ ಚಿಂತನೆಗಳೂ ಒಂದು ಕಾರಣ. ಇಂದು ಉಳಿದಿರುವುದು  ಹಾಗೂ ಮುಂದೆ ಉಳಿಯುವುದು ಕೂಡಾ ಆ ಚಿಂತನೆ ಮಾತ್ರಾ. ವ್ಯಕ್ತಿ ಕೇಂದ್ರಿತವಾದ ಯಾವ ಆಚರಣೆಗಳೂ, ಯಾವ ದಿನಗಳು, ಯಾವ ಸಂಗತಿಗಳು ತಾತ್ಕಾಲಿಕ. ಈ ಚಿಂತನೆಯ ಆಚರಣೆಗಳು ಶಾಶ್ವತ. ಹೀಗಾಗಿಯೇ ಗಾಂಧೀಜಿ ಚಿಂತನೆ ಸಾರ್ವಕಾಲಿಕ ಸತ್ಯ. ಈ ಚಿಂತನೆ ಇಂದಿನ ದಿನ ಹೆಚ್ಚು ಪ್ರಸ್ತುತವಾಗಿದೆ.

Advertisement

ಸ್ವಚ್ಛತೆ, ಅಹಿಂಸೆ ಮೊದಲಾದವುಗಳು ಇಂದೂ ನೆನಪಾಗುತ್ತವೆ. ಗಾಂಧಿಯವರಿಗೆ, ಸತ್ಯ ಹಾಗೂ ಅಹಿಂಸೆಗಳು ಪರಂಪರೆಯಿಂದ ಬಂದ ವಿಷಯ ಆಗಿರಲಿಲ್ಲ, ಅದು ಆಚರಣೆಯ ದಾರಿಯಾಗಿತ್ತು. ಹಾಗಾಗಿಯೇ ಅದು ಈ ಮಣ್ಣಿನಲ್ಲೂ ನೆಲೆಯಾಯಿತು. ಈ ಮೌಲ್ಯಗಳ ಅನುಸರಣೆಯೇ ಅವರಿಗೆ ಒಂದು ನೆಲೆಯಲ್ಲಿ ಅಧ್ಯಾತ್ಮಿಕ ಸಾಧನೆ ಹಾಗೂ ಇನ್ನೊಂದು ನೆಲೆಯಲ್ಲಿ ರಾಜಕೀಯ ಕ್ರಿಯೆ ಆಗಿತ್ತು. ಗಾಂಧೀ ಚಿಂತನೆಗಳೆಲ್ಲವೂ ಹಾಗೆಯೇ. ಯಾವ ಕ್ಷೇತ್ರದಲ್ಲಿ ನೋಡಿದರೂ ಗಾಂಧಿ ಚಿಂತನೆ ಎದ್ದು ಕಾಣುತ್ತದೆ.

ಗಾಂಧಿವಾದವನ್ನು ಹೀಗೇ ಸುಮ್ಮನೆ ಮಾತನಾಡುವುದರಲ್ಲಿ ಅರ್ಥವಿಲ್ಲ, ಅದು ಆಚರಣೆಯ ಮೂಲಕ ಜಾರಿಯಾಗಬೇಕು. ಗಾಂಧೀ ಚಿಂತನೆಯನ್ನು ಹೆಚ್ಚು ತಿಳಿಯುವ ಮೂಲಕ ಇನ್ನಷ್ಟು ಹತ್ತಿರವಾಗಬೇಕು. ಏಕೆಂದರೆ ಪ್ರಸ್ತುತ ಕಾಲಘಟ್ಟದ ಅಶಾಂತಿಯ ವಾತಾವರಣದಲ್ಲಿ ಪ್ರತೀ ವ್ಯಕ್ತಿಗೂ ಈ ಚಿಂತನೆಯ ಅವಶ್ಯಕತೆ ಇದೆ. ಸ್ವಾವಲಂಬನೆಯ ಹಾದಿ ಬೇಕಾಗಿದೆ, ಸಾತ್ವಿಕ ಹೋರಾಟದ ದಾರಿ ಅಗತ್ಯವಿದೆ. ಸ್ವಾಭಿಮಾನದ ಕಿಚ್ಚು ಬೇಕಾಗಿದೆ. ಹೀಗಾಗಿ ಕ್ಷುಲ್ಲಕ ರಾಜಕೀಯ ಬದಿಗಿಟ್ಟು ಪ್ರೀತಿ, ಶಾಂತಿ, ಅಹಿಂಸೆ, ಸತ್ಯಗಳೆಡೆಗಿನ ನಮ್ಮ ಬದ್ಧತೆಯ ಬದುಕು ಗಟ್ಟಿಯಾಗಬೇಕು, ಅನುದಿನವೂ ನಮ್ಮ ಸಣ್ಣ ಸಣ್ಣ ಕ್ರಿಯೆಗಳಲ್ಲೂ ಈ ಚಿಂತನೆಗಳು ಪ್ರತಿಫಲಿಸಬೇಕು. ಗಾಂಧೀಜಿ ಸಾರ್ವಕಾಲಿಕ ಹಾಗೂ ಪ್ರತಿದಿನವೂ ಸತ್ಯವಾಗಿರಬೇಕು.

Advertisement
ಗಾಂಧಿ ಮೌಲ್ಯಗಳ ನಡುವಿನ ಮೌನ
ಈ ನೆಲೆಯಲ್ಲಿ ಸಾಹಿತಿ, ಚಿಂತಕ  ಅರವಿಂದ ಚೊಕ್ಕಾಡಿ ಅವರ ಗಾಂಧಿ ಮೌಲ್ಯಗಳ ನಡುವಿನ ಮೌನ ಪುಸ್ತಕದಿಂದ ಆಯ್ದ ಭಾಗಗಳನ್ನು ಪ್ರತಿದಿನವೂ ನಾವು ಪ್ರಕಟಿಸುತ್ತೇವೆ. ಗಾಂಧೀ ಚಿಂತನೆಯನ್ನು ಮುಂದಿನ ಪೀಳಿಗೆಗೆ “ಕನೆಕ್ಟ್”‌ ಮಾಡುವ ಅರವಿಂದ ಚೊಕ್ಕಾಡಿ ಅವರ ಚಿಂತನೆ ಅಗತ್ಯವಾಗಿ ಸಾಕಾರ ಆಗಬೇಕಾಗಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

16 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

16 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

16 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

16 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

16 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

16 hours ago