ಗಾಂಧಿ ಜಯಂತಿ. ಇದು ವ್ಯಕ್ತಿಯ ಆರಾಧನೆಯಲ್ಲ, ಇದೊಂದು ಚಿಂತನೆಯ ಆರಾಧನೆ. ಈ ಚಿಂತನೆ ಸಾರ್ವಕಾಲಿಕ ಸತ್ಯ.
ಈ ದೇಶದಲ್ಲಿ ಮಹಾನ್ ರಾಷ್ಟ್ರಪುರುಷ ಹುಟ್ಟಿದ್ದು ಮಾತ್ರವಲ್ಲ ಇಡೀ ಜಗತ್ತಿಗೆ ಸತ್ಯ, ಧರ್ಮ, ನ್ಯಾಯದ ಸಂದೇಶವನ್ನು ಸಾರಿ ರಾಷ್ಟ್ರಪಿತ ಎನಿಸಿಕೊಂಡ ಮಹಾನ್ ಚೇತನ. ಹೀಗಾಗಿಯೇ ಭಾರತ ಸರ್ವಶ್ರೇಷ್ಟ ಎನಿಸಿಕೊಳ್ಳಲು ಇಂತಹ ಚಿಂತನೆಗಳೂ ಒಂದು ಕಾರಣ. ಇಂದು ಉಳಿದಿರುವುದು ಹಾಗೂ ಮುಂದೆ ಉಳಿಯುವುದು ಕೂಡಾ ಆ ಚಿಂತನೆ ಮಾತ್ರಾ. ವ್ಯಕ್ತಿ ಕೇಂದ್ರಿತವಾದ ಯಾವ ಆಚರಣೆಗಳೂ, ಯಾವ ದಿನಗಳು, ಯಾವ ಸಂಗತಿಗಳು ತಾತ್ಕಾಲಿಕ. ಈ ಚಿಂತನೆಯ ಆಚರಣೆಗಳು ಶಾಶ್ವತ. ಹೀಗಾಗಿಯೇ ಗಾಂಧೀಜಿ ಚಿಂತನೆ ಸಾರ್ವಕಾಲಿಕ ಸತ್ಯ. ಈ ಚಿಂತನೆ ಇಂದಿನ ದಿನ ಹೆಚ್ಚು ಪ್ರಸ್ತುತವಾಗಿದೆ.
ಸ್ವಚ್ಛತೆ, ಅಹಿಂಸೆ ಮೊದಲಾದವುಗಳು ಇಂದೂ ನೆನಪಾಗುತ್ತವೆ. ಗಾಂಧಿಯವರಿಗೆ, ಸತ್ಯ ಹಾಗೂ ಅಹಿಂಸೆಗಳು ಪರಂಪರೆಯಿಂದ ಬಂದ ವಿಷಯ ಆಗಿರಲಿಲ್ಲ, ಅದು ಆಚರಣೆಯ ದಾರಿಯಾಗಿತ್ತು. ಹಾಗಾಗಿಯೇ ಅದು ಈ ಮಣ್ಣಿನಲ್ಲೂ ನೆಲೆಯಾಯಿತು. ಈ ಮೌಲ್ಯಗಳ ಅನುಸರಣೆಯೇ ಅವರಿಗೆ ಒಂದು ನೆಲೆಯಲ್ಲಿ ಅಧ್ಯಾತ್ಮಿಕ ಸಾಧನೆ ಹಾಗೂ ಇನ್ನೊಂದು ನೆಲೆಯಲ್ಲಿ ರಾಜಕೀಯ ಕ್ರಿಯೆ ಆಗಿತ್ತು. ಗಾಂಧೀ ಚಿಂತನೆಗಳೆಲ್ಲವೂ ಹಾಗೆಯೇ. ಯಾವ ಕ್ಷೇತ್ರದಲ್ಲಿ ನೋಡಿದರೂ ಗಾಂಧಿ ಚಿಂತನೆ ಎದ್ದು ಕಾಣುತ್ತದೆ.
ಗಾಂಧಿವಾದವನ್ನು ಹೀಗೇ ಸುಮ್ಮನೆ ಮಾತನಾಡುವುದರಲ್ಲಿ ಅರ್ಥವಿಲ್ಲ, ಅದು ಆಚರಣೆಯ ಮೂಲಕ ಜಾರಿಯಾಗಬೇಕು. ಗಾಂಧೀ ಚಿಂತನೆಯನ್ನು ಹೆಚ್ಚು ತಿಳಿಯುವ ಮೂಲಕ ಇನ್ನಷ್ಟು ಹತ್ತಿರವಾಗಬೇಕು. ಏಕೆಂದರೆ ಪ್ರಸ್ತುತ ಕಾಲಘಟ್ಟದ ಅಶಾಂತಿಯ ವಾತಾವರಣದಲ್ಲಿ ಪ್ರತೀ ವ್ಯಕ್ತಿಗೂ ಈ ಚಿಂತನೆಯ ಅವಶ್ಯಕತೆ ಇದೆ. ಸ್ವಾವಲಂಬನೆಯ ಹಾದಿ ಬೇಕಾಗಿದೆ, ಸಾತ್ವಿಕ ಹೋರಾಟದ ದಾರಿ ಅಗತ್ಯವಿದೆ. ಸ್ವಾಭಿಮಾನದ ಕಿಚ್ಚು ಬೇಕಾಗಿದೆ. ಹೀಗಾಗಿ ಕ್ಷುಲ್ಲಕ ರಾಜಕೀಯ ಬದಿಗಿಟ್ಟು ಪ್ರೀತಿ, ಶಾಂತಿ, ಅಹಿಂಸೆ, ಸತ್ಯಗಳೆಡೆಗಿನ ನಮ್ಮ ಬದ್ಧತೆಯ ಬದುಕು ಗಟ್ಟಿಯಾಗಬೇಕು, ಅನುದಿನವೂ ನಮ್ಮ ಸಣ್ಣ ಸಣ್ಣ ಕ್ರಿಯೆಗಳಲ್ಲೂ ಈ ಚಿಂತನೆಗಳು ಪ್ರತಿಫಲಿಸಬೇಕು. ಗಾಂಧೀಜಿ ಸಾರ್ವಕಾಲಿಕ ಹಾಗೂ ಪ್ರತಿದಿನವೂ ಸತ್ಯವಾಗಿರಬೇಕು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…