Advertisement
ಸುದ್ದಿಗಳು

ಗಾಂಧಿ ಜಯಂತಿ | ಕಲ್ಮಡ್ಕ ಗ್ರಾಪಂ ವತಿಯಿಂದ ಗಾಂಧಿ ಜಯಂತಿ ದಿನಾಚರಣೆ

Share

ಅಜಾದಿ ಕಾ ಅಮೃತ ಮಹೋತ್ಸವದ ಮತ್ತು ಗಾಂಧಿ ಜಯಂತಿ ದಿನಾಚರಣೆಯನ್ನು ಕಲ್ಮಡ್ಕ ಗ್ರಾಪಂ ವತಿಯಿಂದ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್  ದೀಪ ಬೆಳಗಿಸಿದರು, ಗ್ರಾಮ ಪಂಚಾಯತಿನ ಸ್ವಚ್ಛವಾಹಿನಿ ವಾಹನಕ್ಕೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ. ಎಸ್ ಇವರು ಚಾಲನೆಯನ್ನು ನೀಡಿದರು.

ಕಲ್ಮಡ್ಕ ಗ್ರಾಮ ಪಂಚಾಯತಿನ ನೂತನವಾಗಿ ನಿರ್ಮಿಸಿದ ಸ್ವಚ್ಛ ಸಂಕೀರ್ಣದ ಕಟ್ಟಡವನ್ನು ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ  ಅಬ್ದುಲ್ ಗಫೂರ್ ರಿಬ್ಬನ್ ಕತ್ತರಿಸುವುದರ ಮೂಲಕ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಗಾಂಧಿ ನಡಿಗೆಯ ಮೂಲಕ ಸ್ವಚ್ಛತಾ ಜಾಥಾ ಮಾಡಲಾಯಿತು ಮತ್ತು ಉದ್ಯೋಗ ಖಾತರಿ ಹೆಚ್ಚುವರಿ ಕ್ರಿಯಾಯೋಜನೆ ಮತ್ತು ಸೋಕ್ ಪಿಟ್ 100 ದಿನಗಳ ಅಭಿಯಾನಕ್ಕೆ ಚಾಲನೆಯನ್ನು ನೀಡಿ ಫಲಾನುಭವಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹಾಜಿರಾ ಗಫೂರ್, ಉಪಾಧ್ಯಕ್ಷರಾದ ಮಹೇಶ್ ಕುಮಾರ್ ಕೆ ಎಸ್, ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಹರೀಶ ಎಂ, ಮೀನಾಕ್ಷಿ ಕೆ, ಮೋಹಿನಿ ಎಂ, ಪವಿತ್ರಾ ಕುಧ್ವ , ಜಯಲತಾ ಕೆ.‌ಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ್ ಕುಮಾರ್ ಸಿ.ವಿ ಹಾಗೂ ಕಾರ್ಯದರ್ಶಿ ಗೋಪಾಲಕೃಷ್ಣ ಕೆ ಹಾಗೂ ಸಿಬ್ಬಂದಿ ವರ್ಗ, ಸಂಪನ್ಮೂಲ ವ್ಯಕ್ತಿಗಳಾದ ವಾಸುದೇವ ನಡ್ಕ, ಅಂಗನವಾಡಿ ಕಾರ್ಯಕರ್ತೆಯರು , ಆರೋಗ್ಯ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಗುತ್ತಿಗೆದಾರರಾದ ರವೀಶ್ ಆಕ್ರಿಕಟ್ಟೆ ಮತ್ತು ಗಣೇಶ್, ಸಂಘ ಸಂಸ್ಥೆಯ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

2 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

13 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

14 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

15 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

15 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

15 hours ago