ಗಾಂಧಿ ಮಾದರಿ | ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಿಸಿದರು..! |

October 2, 2022
10:59 AM

ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು  ಪಂಜದ ಅಳ್ಪೆಯ ಜಿನ್ನಪ್ಪ ಅವರು.

ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror