ಗಾಂಧಿ ಮಾದರಿ | ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಿಸಿದರು..! |

October 2, 2022
10:59 AM

ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು  ಪಂಜದ ಅಳ್ಪೆಯ ಜಿನ್ನಪ್ಪ ಅವರು.

ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ
August 21, 2026
7:49 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror