ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು ಪಂಜದ ಅಳ್ಪೆಯ ಜಿನ್ನಪ್ಪ ಅವರು.
ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…