ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು ಪಂಜದ ಅಳ್ಪೆಯ ಜಿನ್ನಪ್ಪ ಅವರು.
ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…