ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು ಪಂಜದ ಅಳ್ಪೆಯ ಜಿನ್ನಪ್ಪ ಅವರು.
ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…