Advertisement
ಸುದ್ದಿಗಳು

ಗಾಂಧಿ ಮಾದರಿ | ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಿಸಿದರು..! |

Share

ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು  ಪಂಜದ ಅಳ್ಪೆಯ ಜಿನ್ನಪ್ಪ ಅವರು.

ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

3 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

10 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

21 hours ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

1 day ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

1 day ago