ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು ಪಂಜದ ಅಳ್ಪೆಯ ಜಿನ್ನಪ್ಪ ಅವರು.
ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…