ಎಲ್ಲೆಡೆಯೂ ಗಾಂಧಿ ಜಯಂತಿಯನ್ನು ಆಚರಿಸಿದರೆ ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಮಹಾತ್ಮಾ ಗಾಂಧೀಜಿಯವರಂತೆಯೇ ವೇಷ ಧರಿಸಿ ಧ್ವಜಾರೋಹಣ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಿದವರು ಪಂಜದ ಅಳ್ಪೆಯ ಜಿನ್ನಪ್ಪ ಅವರು.
ಸುಳ್ಯ ತಾಲೂಕಿನ ಪಂಜದ ಅಳ್ಪೆಯಲ್ಲಿ ಗ್ರಾಮ ಸ್ವರಾಜ್ಯ ಎಂಬ ತಂಡ ಹಲವು ಸಮಯಗಳಿಂದ ಕಾರ್ಯನಿರ್ವಹಿಸುತ್ತಿದೆ. ಗಾಂಧೀಜಿಯವರು ಕನಸಿನ ಗ್ರಾಮವನ್ನು ಕಟ್ಟುವ ಉದ್ದೇಶದೊಂದಿಗೆ ಇಲ್ಲಿ ಗ್ರಾಮ ಸ್ವರಾಜ್ಯ ಕೆಲಸ ಮಾಡುತ್ತಿದೆ. ಸ್ವಚ್ಛತೆ, ಆರೋಗ್ಯ, ವಸತಿ ಸೇರಿದಂತೆ ಗ್ರಾಮೀಣ ಭಾಗದ ಮೂಲಭೂತ ಸೇವೆಗಳ ಬಗ್ಗೆ ಸತತ ಹೋರಾಟ, ಆಂದೋಲನ, ಜಾಗೃತಿಯ ಮೂಲಕ ಊರಿನ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿದೆ. ಇದರ ನೇತೃತ್ವ ವಹಿಸಿದವರು ಜಿನ್ನಪ್ಪ ಗೌಡ ಅಳ್ಪೆ. ಇದೀಗ ಗಾಂಧಿ ಜಯಂತಿಯನ್ನು ಆಸುಪಾಸಿನ ಮಕ್ಕಳು ಹಾಗೂ ಹಿರಿಯರು ಸೇರಿಕೊಂಡು ಗಾಂಧಿಜಯಂತಿಯನ್ನು ವಿಶೇಷವಾಗಿ ಆಚರಿಸಿದರು. ಬಿಳಿ ದೋತಿ ಹಾಗೂ ಶಾಲು ಧರಿಸಿ , ಟೋಪಿ, ಕನ್ನಡಕ ಧರಿಸಿ ಗಾಂಧೀಜಿಯವರ ಚಿತ್ರ ಕಣ್ಣ ಮುಂದೆ ಬರುವಂತೆ ಮಾಡಿ ಧ್ವಜಾರೋಹಣಗೊಳಿಸಿ ಗಾಂಧಿ ಜಯಂತಿಯನ್ನು ಆಚರಿಸಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…