ರಾಜ್ಯ

ರಾಜ್ಯದಲ್ಲಿಯೇ ಇದು ವಿಶೇಷ ಮಾದರಿಯ ಗಾಂಧಿ ಜಯಂತಿ ಆಚರಣೆ | ಪಂಜದಲ್ಲಿ ಉಪವಾಸ ಸತ್ಯಾಗ್ರಹದ ಮೂಲಕ ಗಾಂಧಿಜಯಂತಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶದೆಲ್ಲೆಡೆ ಗಾಂಧಿ ಜಯಂತಿ ಆಚರಿಸಲಾಗಿದೆ. ಎಲ್ಲೆಡೆಯೂ ಸ್ವಚ್ಛತಾ ಕಾರ್ಯಕ್ರಮದ ಮೂಲಕವೇ ಗಾಂಧಿ ಜಯಂತಿ ಆಚರಣೆ ನಡೆದಿದೆ. ಆದರೆ ಸುಳ್ಯ ತಾಲೂಕಿನ ಪಂಜದಲ್ಲಿ  ಮಾತ್ರಾ ವಿಭಿನ್ನವಾಗಿ ಗಾಂಧಿ ಜಯಂತಿ ಆಚರಣೆಯಾಗಿದೆ. ಗಾಂಧೀಜಿಯವರ ಹೋರಾಟಗಳಲ್ಲಿ ಪ್ರಮುಖ ಪಾತ್ರ ವಹಿಸಿದ ಉಪವಾಸ ಸತ್ಯಾಗ್ರಹದ ಮೂಲಕ ಇಲ್ಲಿ ಗಾಂಧಿ ಚಿಂತನೆಗಳಿಗೆ  ಆದ್ಯತೆ ನೀಡಲಾಗಿದೆ. ಗ್ರಾಮದ ಅಭಿವೃದ್ಧಿಯ ಕಡೆಗೆ ಗಮನ ಸಳೆಯಲು ಈ ಸತ್ಯಾಗ್ರಹ ನಡೆದಿದೆ. ಸಾತ್ವಿಕ ಹೋರಾಟದ ಮೂಲಕ ಪಂಜದ ಅಭಿವೃದ್ಧಿಯ ಚಿಂತನೆ ಇಲ್ಲಿ ನಡೆದಿದೆ.

Advertisement

ಸುಳ್ಯ ತಾಲೂಕಿನ ಪಂಜದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹವನ್ನು ಪಂಜದ ಮಹಾತ್ಮಾಗಾಂಧಿ  ವಿದ್ಯಾಪೀಠ ಹಾಗೂ ಪಂಜ ಗ್ರಾಮ ಸ್ವರಾಜ್ಯ ತಂಡದ ವತಿಯಿಂದ  ನಡೆದಿದೆ.  ಬೆಳಗ್ಗೆ 8.30 ರಿಂದ ಸಂಜೆ 4 ರ ತನಕ ಪಂಜದಲ್ಲಿರುವ ಗ್ರಾಮದ ವಿಧಾನಸೌಧ ಎದುರುಗಡೆ ನಡೆದ ಉಪವಾಸ ಸತ್ಯಾಗ್ರಹದಲ್ಲಿ  ಪಂಜ ಹೋಬಳಿ ಕೇಂದ್ರದಲ್ಲಿ ಇರುವ ಇಲಾಖೆಗಳ ಬಗ್ಗೆ ಸರಕಾರಕ್ಕೆ ಹಕ್ಕೊತ್ತಾಯದ ಕುರಿತು ಹಾಗೂ ಕಾರ್ಯ ನಿರ್ವಹಿಸುವ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಎಲ್ಲಾ ಸೌಲಭ್ಯಗಳು ಸಿಗಬೇಕು ಎಂದು ಗಾಂಧೀ ಮಾರ್ಗದಲ್ಲಿ  ಗಮನ ಸೆಳೆಯುವುದು  ಇದರ ಉದ್ದೇಶವಾಗಿತ್ತು ಎಂದು ಮಹಾತ್ಮಾಗಾಂಧಿ ವಿದ್ಯಾಪೀಠದ ಪುರುಷೋತ್ತಮ ಮುಡೂರು ತಿಳಿಸಿದ್ದಾರೆ. 

ಸರಕಾರದಿಂದ ಸಿಗುವಂತಹ ಸೌಲಭ್ಯಗಳಲ್ಲಿ ಪಂಜದಲ್ಲಿ ಇದುವರೆಗೂ ವಂಚನೆಯೇ ನಡೆದಿದೆ. ಹೋಬಳಿ ಕೇಂದ್ರದಲ್ಲಿ ಇರುವಂತಹ ಸೇವೆಗಳಾದ ಅಂಚೆ ಇಲಾಖೆ, ಪೊಲೀಸ್ ಸ್ಟೇಷನ್ , ನೀರಿನ ಸೌಲಭ್ಯ , ಇಂಟರ್ನೆಟ್,  ವಿದ್ಯುತ್ , ಆರೋಗ್ಯ ಕೇಂದ್ರ , ಶೈಕ್ಷಣಿಕ ಕೇಂದ್ರಗಳು,  ಬ್ಯಾಂಕ್ ವ್ಯವಹಾರಗಳು,  ರಸ್ತೆ ಸಾರಿಗೆ ವ್ಯವಸ್ಥೆಗಳು,  ಸ್ವಚ್ಛತೆ,  ಶೌಚಾಲಯ,  ಪಶುಸಂಗೋಪನೆ,  ಕಾಲುದಾರಿಗಳ ಸಮಸ್ಯೆಗಳು,  ಕುಡಿಯುವ ನೀರಿನ ಸಮಸ್ಯೆಗಳು,  ಇತರ ಸೌಲಭ್ಯಗಳ  ಕೊರತೆ ಇದೆ ಎಂದು  ಗ್ರಾಮಸ್ವರಾಜ್ ತಂಡ ಮುಖಂಡ, ಸಾಮಾಜಿಕ ಕಾರ್ಯಕರ್ತ  ಜಿನ್ನಪ್ಪ ಅಳ್ಪೆ ಹೇಳುತ್ತಾರೆ.  ವಿಡಿಯೋ ವರದಿ…….

Advertisement

ಉಪವಾಸ ಸತ್ಯಾಗ್ರಹದಲ್ಲಿ ಪುರುಷೋತ್ತಮ ಮುಡೂರು, ಧರ್ಮಪಾಲ ಗೌಡ , ಭುವನೆಂದ್ರ ಗೌಡ,  ಲಕ್ಷ್ಮಣ ಗೌಡ,  ಜಿನ್ನಪ್ಪ ಗೌಡ ಮತ್ತು ಸೈಲಿಸ್ ಭಾಗವಹಿಸಿದರು. 

ಸತ್ಯಾಗ್ರಹದ ಸ್ಥಳಕ್ಕೆ ಗಣ್ಯರ ಭೇಟಿ

ಉಪವಾಸದ ಸ್ಥಳಕ್ಕೆ  ಪಂಜ ವೈದ್ಯಾಧಿಕಾರಿ ಡಾ ಮಂಜುನಾಥ್ , ಗ್ರಾಮ ಪಂಚಾಯತ್‌ ಕಾರ್ಯದರ್ಶಿ  ಕೆ ಪದ್ಮಯ್ಯ , ತಾಪಂ ಮಾಜಿ ಅಧ್ಯಕ್ಷೆ ಎನ್‌ ಎಸ್‌ ಸುವರ್ಣಿನಿ, ಪಂಜ ಗ್ರಾಪಂ ಮಾಜಿ ಅಧ್ಯಕ್ಷ ಕಾರ್ಯಪ್ಪ ಗೌಡ,  ದೇವಿಪ್ರಸಾದ್ ಕಾನತ್ತೂರು,  ಗಂಗಾಧರ ಶಾಸ್ತ್ರಿ ಪುತ್ಯ , ಸಂಗಾತಿ ಸ್ಟೋರ್ ಮಾಲಕ ವೆಂಕಟ್ರಮಣ ಭಟ್‌ , ಕುದ್ವ ಕೇಶವ,  ತಿರುಮಲೇಶ್ ಭಟ್ ಗುಂಡಿಮಜಲು,   ಗಂಗಾಧರ ಗುಂಡಕ್ಕ ಮೊದಲಾದವರು ಭೇಟಿ ನೀಡಿದರು. 

 

 

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

24 minutes ago

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

5 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

5 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

5 hours ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

5 hours ago