ವಿಶೇಷ ವರದಿಗಳು

ಗಾಂಧಿ ಜಯಂತಿ : ಗಾಂಧೀಜಿ ಚಿಂತನೆಯ‌ ಪ್ರಸ್ತುತತೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.

Advertisement

ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು  ಸರಳವಾಗಿಸುತ್ತದೆ.  ಗೋಜಲುಗಳನ್ನು  ನಿವಾರಿಸುತ್ತದೆ. ಮಾತು, ಕೃತಿಗಳು  ಸರಳವಾದಾಗ  ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ   ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು.    ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .

ರಾಜ ಸತ್ಯ ಹರಿಶ್ಚಂದ್ರ ರಿಂದ  ಬಹಳಷ್ಟು ಪ್ರಭಾವಿತರಾಗಿದ್ದ  ಗಾಂಧೀಜಿವರು ಬದುಕಿನುದ್ದಕ್ಕೂ ಪರಿಪಾಲಿಸಿಕೊಂಡು ಬಂದರು. ಮಾತ್ರವಲ್ಲ ಸತ್ಯದ ಹಾದಿಯಲ್ಲಿ ಎಷ್ಟೇ ಕಲ್ಲುಮುಳ್ಳುಗಳೆದುರಾದರೂ ಎದೆಗುಂದದೆ  , ಯಾವುದೇ ಒತ್ತಡಕ್ಕೂ ಮಣಿಯದೆ ತನ್ನ ಸತ್ಯದ ಹಾದಿಯಲ್ಲಿ ಮುನ್ನಡೆದರು. ಜಗತ್ತಿಗೇ ಮಾದರಿಯಾದರು.
ಖಾದಿ  ವಸ್ತ್ರ ಕ್ಕೆ ಇಂದು ಇಷ್ಟು ಪ್ರಚಾರ ಪ್ರಾಮುಖ್ಯತೆ ವಿಶ್ವ ಮಟ್ಟದಲ್ಲಿ ದೊರೆಯುತ್ತಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಗಾಂಧೀಜಿಯವರು. ಸ್ವಾತಂತ್ರ್ಯ ಪೂರ್ವದಲ್ಲೇ ಸ್ವಾವಲಂಬಿ ಭಾರತದ ಕಲ್ಪನೆಯನ್ನು ಕಂಡಿದ್ದರು.  ಸ್ವಾವಲಂಬನೆ ಕುಟುಂಬದಿಂದಲೇ ಆರಂಭಗೊಳ್ಳಬೇಕು. ಸ್ವಾವಲಂಬಿ ಗ್ರಾಮ, ಆಮೇಲೆ ಸಮಾಜ, ರಾಜ್ಯ, ಸ್ವಾವಲಂಬಿ ದೇಶ, ಈ ಕಲ್ಪನೆಯೇ ಎಷ್ಟು ಸುಂದರವಾಗಿದೆಯಲ್ಲವೇ. ಪರಿವರ್ತನೆಯಾಗ ಬೇಕದ್ದು ಮನಸುಗಳಲ್ಲಿ.  ಮನಮನದಲ್ಲಿರುವ  ಬೇರೂರಿರುವ ದಾಸ್ಯದ ಭಾವನೆಯನ್ನು ಹೊರಹಾಕಿ ಸ್ವಾವಲಂಬನೆಯ  ಬೀಜ ಬಿತ್ತ ಬೇಕಾಗಿದೆ.  ಖಾದಿ ಉದ್ಯಮ ಸ್ವದೇಶೀ ಮಾರುಕಟ್ಟೆಯ ಬಲವರ್ಧನೆಯಲ್ಲಿ ಪ್ರಮುಖವಾಗಿದೆ. ಇಂದು ಜಗತ್ತಿನಾದ್ಯಂತ ಬಹು ಬೇಡಿಕೆಯ ಉದ್ಯಮವಾಗಿ ಬೆಳೆದು ನಿಂತುದರಲ್ಲಿ ಗಾಂಧೀಜಿಯವರ ಸ್ವಾವಲಂಬಿ ತತ್ವ ಅಡಿಪಾಯವಾಗಿದೆ.
ಸಮಾಜದಲ್ಲಿ ಎಲ್ಲವೂ ಸರಿಯಾಗಿರಬೇಕೆಂದರೆ  ಸಾಮಾಜಿಕ ಸಾಮರಸ್ಯ ಬಹಳ ಮುಖ್ಯ. ಸ್ವಾಸ್ಥ್ಯ ಸಮಾಜಕ್ಕೆ  ಇದು ಬಹಳ ಅಗತ್ಯ. ಜಾತಿ, ಧರ್ಮಗಳ ಅಸಹಿಷ್ಣುತೆ ಸಲ್ಲ.  ಇಲ್ಲಿ ಎಲ್ಲರೂ ಸಮಾನರು. ಇದು ಅಂದಿಗೂ ಇಂದಿಗೂ ಪ್ರಸ್ತುತವೇ.
ಸಸ್ಯಾಹಾರ ಹಾಗೂ ಉಪವಾಸ ಆರೋಗ್ಯದ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಇವು  ಹೋರಾಟದ ಅಸ್ತ್ರ ಗಳು ಕೂಡ.  ಈ ಅಸ್ತ್ರವನ್ನು ಬ್ರಿಟಿಷ್ ರ ವಿರುದ್ಧದ ಹೋರಾಟದಲ್ಲಿ  ಗಾಂಧೀಜಿಯವರು ಸಮರ್ಥವಾಗಿ ಬಳಸಿದರು.
ಅಸ್ಪೃಶ್ಯತೆ, ಅಸಮಾನತೆ  ಸಮಾಜದ ಅಭಿವೃದ್ಧಿ ಯಲ್ಲಿ ದೊಡ್ಡ ತೊಡಕು. ಇದು ಮನಸ್ಸಿನ ಕೊಳಕಿಗೆ ಹಿಡಿದ ಕನ್ನಡಿ. ಎಲ್ಲರೂ ಸಮಾನರು , ಜಾತಿ , ಮತಗಳೆಲ್ಲವೂ ದೇಶದ ಹಿತದ ಮುಂದೆ ಗೌಣವೆಂಬ ದೃಷ್ಟಿ ಕೋನ ಬೆಳೆಯದಿದ್ದರೆ ಅಭಿವೃದ್ಧಿ ಅಸಾಧ್ಯ.
ಸ್ವಾತಂತ್ರ್ಯ ನಂತರ ಗಾಂಧೀಜಿ ಹಾಗೂ ಖಾದಿ ರಾಜಕೀಯ ಓಟು ಬ್ಯಾಂಕ್ ನ ಅಸ್ತ್ರ ವಾಗಿ ದುರುಪಯೋಗವಾಗುತ್ತಿರುವುದು ಮಾತ್ರ ನಂಬಲೇ ಬೇಕಾದ ಸತ್ಯ.!
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆ | ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ | ಮತ್ತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…

28 minutes ago

ಬಗರ್ ಹುಕುಂ ಸಾಗುವಳಿ | ಸಕ್ರಮಕ್ಕಾಗಿ 42289 ರೈತರಿಂದ ಅರ್ಜಿ

ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…

52 minutes ago

ಶುದ್ಧ ಕನ್ನಡ ಪದ ಮತ್ತೆ ವಿಜೃಂಭಿಸಲಿ – ರಾಘವೇಶ್ವರ ಶ್ರೀ

ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…

1 hour ago

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆ | ಪ್ರವಾಹಕ್ಕೆ ಏಳು ಮಂದಿ ಬಲಿ

ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…

1 hour ago

ದೇಶದ ಜಿಡಿಪಿಯಲ್ಲಿ ಗಮನಾರ್ಹ ಪ್ರಗತಿ

ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…

7 hours ago

ಹವಾಮಾನ ವರದಿ | 18-08-2025 | ವಾಯುಭಾರ ಕುಸಿತದ ಮಳೆಯ ಅಬ್ಬರ | ಆ.19-20 ರಿಂದ ಮಳೆ ಕಡಿಮೆ |

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…

9 hours ago