Advertisement
ವಿಶೇಷ ವರದಿಗಳು

ಗಾಂಧಿ ಜಯಂತಿ : ಗಾಂಧೀಜಿ ಚಿಂತನೆಯ‌ ಪ್ರಸ್ತುತತೆ

Share

ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.

Advertisement
Advertisement

ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು  ಸರಳವಾಗಿಸುತ್ತದೆ.  ಗೋಜಲುಗಳನ್ನು  ನಿವಾರಿಸುತ್ತದೆ. ಮಾತು, ಕೃತಿಗಳು  ಸರಳವಾದಾಗ  ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ   ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು.    ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .

ರಾಜ ಸತ್ಯ ಹರಿಶ್ಚಂದ್ರ ರಿಂದ  ಬಹಳಷ್ಟು ಪ್ರಭಾವಿತರಾಗಿದ್ದ  ಗಾಂಧೀಜಿವರು ಬದುಕಿನುದ್ದಕ್ಕೂ ಪರಿಪಾಲಿಸಿಕೊಂಡು ಬಂದರು. ಮಾತ್ರವಲ್ಲ ಸತ್ಯದ ಹಾದಿಯಲ್ಲಿ ಎಷ್ಟೇ ಕಲ್ಲುಮುಳ್ಳುಗಳೆದುರಾದರೂ ಎದೆಗುಂದದೆ  , ಯಾವುದೇ ಒತ್ತಡಕ್ಕೂ ಮಣಿಯದೆ ತನ್ನ ಸತ್ಯದ ಹಾದಿಯಲ್ಲಿ ಮುನ್ನಡೆದರು. ಜಗತ್ತಿಗೇ ಮಾದರಿಯಾದರು.
ಖಾದಿ  ವಸ್ತ್ರ ಕ್ಕೆ ಇಂದು ಇಷ್ಟು ಪ್ರಚಾರ ಪ್ರಾಮುಖ್ಯತೆ ವಿಶ್ವ ಮಟ್ಟದಲ್ಲಿ ದೊರೆಯುತ್ತಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಗಾಂಧೀಜಿಯವರು. ಸ್ವಾತಂತ್ರ್ಯ ಪೂರ್ವದಲ್ಲೇ ಸ್ವಾವಲಂಬಿ ಭಾರತದ ಕಲ್ಪನೆಯನ್ನು ಕಂಡಿದ್ದರು.  ಸ್ವಾವಲಂಬನೆ ಕುಟುಂಬದಿಂದಲೇ ಆರಂಭಗೊಳ್ಳಬೇಕು. ಸ್ವಾವಲಂಬಿ ಗ್ರಾಮ, ಆಮೇಲೆ ಸಮಾಜ, ರಾಜ್ಯ, ಸ್ವಾವಲಂಬಿ ದೇಶ, ಈ ಕಲ್ಪನೆಯೇ ಎಷ್ಟು ಸುಂದರವಾಗಿದೆಯಲ್ಲವೇ. ಪರಿವರ್ತನೆಯಾಗ ಬೇಕದ್ದು ಮನಸುಗಳಲ್ಲಿ.  ಮನಮನದಲ್ಲಿರುವ  ಬೇರೂರಿರುವ ದಾಸ್ಯದ ಭಾವನೆಯನ್ನು ಹೊರಹಾಕಿ ಸ್ವಾವಲಂಬನೆಯ  ಬೀಜ ಬಿತ್ತ ಬೇಕಾಗಿದೆ.  ಖಾದಿ ಉದ್ಯಮ ಸ್ವದೇಶೀ ಮಾರುಕಟ್ಟೆಯ ಬಲವರ್ಧನೆಯಲ್ಲಿ ಪ್ರಮುಖವಾಗಿದೆ. ಇಂದು ಜಗತ್ತಿನಾದ್ಯಂತ ಬಹು ಬೇಡಿಕೆಯ ಉದ್ಯಮವಾಗಿ ಬೆಳೆದು ನಿಂತುದರಲ್ಲಿ ಗಾಂಧೀಜಿಯವರ ಸ್ವಾವಲಂಬಿ ತತ್ವ ಅಡಿಪಾಯವಾಗಿದೆ.
ಸಮಾಜದಲ್ಲಿ ಎಲ್ಲವೂ ಸರಿಯಾಗಿರಬೇಕೆಂದರೆ  ಸಾಮಾಜಿಕ ಸಾಮರಸ್ಯ ಬಹಳ ಮುಖ್ಯ. ಸ್ವಾಸ್ಥ್ಯ ಸಮಾಜಕ್ಕೆ  ಇದು ಬಹಳ ಅಗತ್ಯ. ಜಾತಿ, ಧರ್ಮಗಳ ಅಸಹಿಷ್ಣುತೆ ಸಲ್ಲ.  ಇಲ್ಲಿ ಎಲ್ಲರೂ ಸಮಾನರು. ಇದು ಅಂದಿಗೂ ಇಂದಿಗೂ ಪ್ರಸ್ತುತವೇ.
ಸಸ್ಯಾಹಾರ ಹಾಗೂ ಉಪವಾಸ ಆರೋಗ್ಯದ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಇವು  ಹೋರಾಟದ ಅಸ್ತ್ರ ಗಳು ಕೂಡ.  ಈ ಅಸ್ತ್ರವನ್ನು ಬ್ರಿಟಿಷ್ ರ ವಿರುದ್ಧದ ಹೋರಾಟದಲ್ಲಿ  ಗಾಂಧೀಜಿಯವರು ಸಮರ್ಥವಾಗಿ ಬಳಸಿದರು.
ಅಸ್ಪೃಶ್ಯತೆ, ಅಸಮಾನತೆ  ಸಮಾಜದ ಅಭಿವೃದ್ಧಿ ಯಲ್ಲಿ ದೊಡ್ಡ ತೊಡಕು. ಇದು ಮನಸ್ಸಿನ ಕೊಳಕಿಗೆ ಹಿಡಿದ ಕನ್ನಡಿ. ಎಲ್ಲರೂ ಸಮಾನರು , ಜಾತಿ , ಮತಗಳೆಲ್ಲವೂ ದೇಶದ ಹಿತದ ಮುಂದೆ ಗೌಣವೆಂಬ ದೃಷ್ಟಿ ಕೋನ ಬೆಳೆಯದಿದ್ದರೆ ಅಭಿವೃದ್ಧಿ ಅಸಾಧ್ಯ.
ಸ್ವಾತಂತ್ರ್ಯ ನಂತರ ಗಾಂಧೀಜಿ ಹಾಗೂ ಖಾದಿ ರಾಜಕೀಯ ಓಟು ಬ್ಯಾಂಕ್ ನ ಅಸ್ತ್ರ ವಾಗಿ ದುರುಪಯೋಗವಾಗುತ್ತಿರುವುದು ಮಾತ್ರ ನಂಬಲೇ ಬೇಕಾದ ಸತ್ಯ.!
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

5 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

5 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago