Advertisement
ವಿಶೇಷ ವರದಿಗಳು

ಗಾಂಧಿ ಜಯಂತಿ : ಗಾಂಧೀಜಿ ಚಿಂತನೆಯ‌ ಪ್ರಸ್ತುತತೆ

Share

ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.

ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು  ಸರಳವಾಗಿಸುತ್ತದೆ.  ಗೋಜಲುಗಳನ್ನು  ನಿವಾರಿಸುತ್ತದೆ. ಮಾತು, ಕೃತಿಗಳು  ಸರಳವಾದಾಗ  ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ   ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು.    ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .

ರಾಜ ಸತ್ಯ ಹರಿಶ್ಚಂದ್ರ ರಿಂದ  ಬಹಳಷ್ಟು ಪ್ರಭಾವಿತರಾಗಿದ್ದ  ಗಾಂಧೀಜಿವರು ಬದುಕಿನುದ್ದಕ್ಕೂ ಪರಿಪಾಲಿಸಿಕೊಂಡು ಬಂದರು. ಮಾತ್ರವಲ್ಲ ಸತ್ಯದ ಹಾದಿಯಲ್ಲಿ ಎಷ್ಟೇ ಕಲ್ಲುಮುಳ್ಳುಗಳೆದುರಾದರೂ ಎದೆಗುಂದದೆ  , ಯಾವುದೇ ಒತ್ತಡಕ್ಕೂ ಮಣಿಯದೆ ತನ್ನ ಸತ್ಯದ ಹಾದಿಯಲ್ಲಿ ಮುನ್ನಡೆದರು. ಜಗತ್ತಿಗೇ ಮಾದರಿಯಾದರು.
ಖಾದಿ  ವಸ್ತ್ರ ಕ್ಕೆ ಇಂದು ಇಷ್ಟು ಪ್ರಚಾರ ಪ್ರಾಮುಖ್ಯತೆ ವಿಶ್ವ ಮಟ್ಟದಲ್ಲಿ ದೊರೆಯುತ್ತಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಗಾಂಧೀಜಿಯವರು. ಸ್ವಾತಂತ್ರ್ಯ ಪೂರ್ವದಲ್ಲೇ ಸ್ವಾವಲಂಬಿ ಭಾರತದ ಕಲ್ಪನೆಯನ್ನು ಕಂಡಿದ್ದರು.  ಸ್ವಾವಲಂಬನೆ ಕುಟುಂಬದಿಂದಲೇ ಆರಂಭಗೊಳ್ಳಬೇಕು. ಸ್ವಾವಲಂಬಿ ಗ್ರಾಮ, ಆಮೇಲೆ ಸಮಾಜ, ರಾಜ್ಯ, ಸ್ವಾವಲಂಬಿ ದೇಶ, ಈ ಕಲ್ಪನೆಯೇ ಎಷ್ಟು ಸುಂದರವಾಗಿದೆಯಲ್ಲವೇ. ಪರಿವರ್ತನೆಯಾಗ ಬೇಕದ್ದು ಮನಸುಗಳಲ್ಲಿ.  ಮನಮನದಲ್ಲಿರುವ  ಬೇರೂರಿರುವ ದಾಸ್ಯದ ಭಾವನೆಯನ್ನು ಹೊರಹಾಕಿ ಸ್ವಾವಲಂಬನೆಯ  ಬೀಜ ಬಿತ್ತ ಬೇಕಾಗಿದೆ.  ಖಾದಿ ಉದ್ಯಮ ಸ್ವದೇಶೀ ಮಾರುಕಟ್ಟೆಯ ಬಲವರ್ಧನೆಯಲ್ಲಿ ಪ್ರಮುಖವಾಗಿದೆ. ಇಂದು ಜಗತ್ತಿನಾದ್ಯಂತ ಬಹು ಬೇಡಿಕೆಯ ಉದ್ಯಮವಾಗಿ ಬೆಳೆದು ನಿಂತುದರಲ್ಲಿ ಗಾಂಧೀಜಿಯವರ ಸ್ವಾವಲಂಬಿ ತತ್ವ ಅಡಿಪಾಯವಾಗಿದೆ.
ಸಮಾಜದಲ್ಲಿ ಎಲ್ಲವೂ ಸರಿಯಾಗಿರಬೇಕೆಂದರೆ  ಸಾಮಾಜಿಕ ಸಾಮರಸ್ಯ ಬಹಳ ಮುಖ್ಯ. ಸ್ವಾಸ್ಥ್ಯ ಸಮಾಜಕ್ಕೆ  ಇದು ಬಹಳ ಅಗತ್ಯ. ಜಾತಿ, ಧರ್ಮಗಳ ಅಸಹಿಷ್ಣುತೆ ಸಲ್ಲ.  ಇಲ್ಲಿ ಎಲ್ಲರೂ ಸಮಾನರು. ಇದು ಅಂದಿಗೂ ಇಂದಿಗೂ ಪ್ರಸ್ತುತವೇ.
ಸಸ್ಯಾಹಾರ ಹಾಗೂ ಉಪವಾಸ ಆರೋಗ್ಯದ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಇವು  ಹೋರಾಟದ ಅಸ್ತ್ರ ಗಳು ಕೂಡ.  ಈ ಅಸ್ತ್ರವನ್ನು ಬ್ರಿಟಿಷ್ ರ ವಿರುದ್ಧದ ಹೋರಾಟದಲ್ಲಿ  ಗಾಂಧೀಜಿಯವರು ಸಮರ್ಥವಾಗಿ ಬಳಸಿದರು.
ಅಸ್ಪೃಶ್ಯತೆ, ಅಸಮಾನತೆ  ಸಮಾಜದ ಅಭಿವೃದ್ಧಿ ಯಲ್ಲಿ ದೊಡ್ಡ ತೊಡಕು. ಇದು ಮನಸ್ಸಿನ ಕೊಳಕಿಗೆ ಹಿಡಿದ ಕನ್ನಡಿ. ಎಲ್ಲರೂ ಸಮಾನರು , ಜಾತಿ , ಮತಗಳೆಲ್ಲವೂ ದೇಶದ ಹಿತದ ಮುಂದೆ ಗೌಣವೆಂಬ ದೃಷ್ಟಿ ಕೋನ ಬೆಳೆಯದಿದ್ದರೆ ಅಭಿವೃದ್ಧಿ ಅಸಾಧ್ಯ.
ಸ್ವಾತಂತ್ರ್ಯ ನಂತರ ಗಾಂಧೀಜಿ ಹಾಗೂ ಖಾದಿ ರಾಜಕೀಯ ಓಟು ಬ್ಯಾಂಕ್ ನ ಅಸ್ತ್ರ ವಾಗಿ ದುರುಪಯೋಗವಾಗುತ್ತಿರುವುದು ಮಾತ್ರ ನಂಬಲೇ ಬೇಕಾದ ಸತ್ಯ.!
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

18 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

18 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago