Advertisement
ವಿಶೇಷ ವರದಿಗಳು

ಗಾಂಧಿ ಜಯಂತಿ : ಗಾಂಧೀಜಿ ಚಿಂತನೆಯ‌ ಪ್ರಸ್ತುತತೆ

Share

ಮಹಾತ್ಮ ಎಂಬ ಶಬ್ದದೊಂದಿಗೆ ಗಾಂಧೀಜಿ ಎಂಬ ಪದ ಸೇರಿದರೇ ಅದಕ್ಕೊಂದು ಪರಿಪೂರ್ಣ ಅರ್ಥ ಬರುವುದು.

ಗಾಂಧೀಜಿಯವರೆಂದರೆ ಸರಳತೆಗೊಂದು ಅನ್ವರ್ಥ.ಸರಳತೆ ಬದುಕಿನ ಸಂಕೀರ್ಣತೆಯನ್ನು  ಸರಳವಾಗಿಸುತ್ತದೆ.  ಗೋಜಲುಗಳನ್ನು  ನಿವಾರಿಸುತ್ತದೆ. ಮಾತು, ಕೃತಿಗಳು  ಸರಳವಾದಾಗ  ಬದುಕು ಸಂತೋಷವಾಗಿರುತ್ತದೆ. ಬೇಡಿಕೆ ಗಳು , ನಿರೀಕ್ಷೆ ಗಳು ಅಗತ್ಯ ಗಳು ಕಡಿಮೆಯಾದಾಗ   ಒತ್ತಡಮುಕ್ತ ಜೀವನ ನಮ್ಮದಾಗುತ್ತದೆ. ಈ ಸರಳ ಸೂತ್ರವನ್ನು ಅನುಸರಿಸಿ ಎಲ್ಲರಿಗೂ ಮಾರ್ಗದರ್ಶನ ಮಾಡಿದರು.    ಎಲ್ಲಾ ಆಡಂಬರಗಳನ್ನು ತ್ಯಜಿಸಿ ಕೇವಲ ಪಂಚೆಯುಟ್ಟು ಸರಳತೆಯ ಪಾಠವನ್ನು ಜಗತ್ತಿಗೇ ಸಾರಿದರು .

ರಾಜ ಸತ್ಯ ಹರಿಶ್ಚಂದ್ರ ರಿಂದ  ಬಹಳಷ್ಟು ಪ್ರಭಾವಿತರಾಗಿದ್ದ  ಗಾಂಧೀಜಿವರು ಬದುಕಿನುದ್ದಕ್ಕೂ ಪರಿಪಾಲಿಸಿಕೊಂಡು ಬಂದರು. ಮಾತ್ರವಲ್ಲ ಸತ್ಯದ ಹಾದಿಯಲ್ಲಿ ಎಷ್ಟೇ ಕಲ್ಲುಮುಳ್ಳುಗಳೆದುರಾದರೂ ಎದೆಗುಂದದೆ  , ಯಾವುದೇ ಒತ್ತಡಕ್ಕೂ ಮಣಿಯದೆ ತನ್ನ ಸತ್ಯದ ಹಾದಿಯಲ್ಲಿ ಮುನ್ನಡೆದರು. ಜಗತ್ತಿಗೇ ಮಾದರಿಯಾದರು.
ಖಾದಿ  ವಸ್ತ್ರ ಕ್ಕೆ ಇಂದು ಇಷ್ಟು ಪ್ರಚಾರ ಪ್ರಾಮುಖ್ಯತೆ ವಿಶ್ವ ಮಟ್ಟದಲ್ಲಿ ದೊರೆಯುತ್ತಿದೆಯೆಂದರೆ ಅದಕ್ಕೆ ಮುಖ್ಯ ಕಾರಣ ಗಾಂಧೀಜಿಯವರು. ಸ್ವಾತಂತ್ರ್ಯ ಪೂರ್ವದಲ್ಲೇ ಸ್ವಾವಲಂಬಿ ಭಾರತದ ಕಲ್ಪನೆಯನ್ನು ಕಂಡಿದ್ದರು.  ಸ್ವಾವಲಂಬನೆ ಕುಟುಂಬದಿಂದಲೇ ಆರಂಭಗೊಳ್ಳಬೇಕು. ಸ್ವಾವಲಂಬಿ ಗ್ರಾಮ, ಆಮೇಲೆ ಸಮಾಜ, ರಾಜ್ಯ, ಸ್ವಾವಲಂಬಿ ದೇಶ, ಈ ಕಲ್ಪನೆಯೇ ಎಷ್ಟು ಸುಂದರವಾಗಿದೆಯಲ್ಲವೇ. ಪರಿವರ್ತನೆಯಾಗ ಬೇಕದ್ದು ಮನಸುಗಳಲ್ಲಿ.  ಮನಮನದಲ್ಲಿರುವ  ಬೇರೂರಿರುವ ದಾಸ್ಯದ ಭಾವನೆಯನ್ನು ಹೊರಹಾಕಿ ಸ್ವಾವಲಂಬನೆಯ  ಬೀಜ ಬಿತ್ತ ಬೇಕಾಗಿದೆ.  ಖಾದಿ ಉದ್ಯಮ ಸ್ವದೇಶೀ ಮಾರುಕಟ್ಟೆಯ ಬಲವರ್ಧನೆಯಲ್ಲಿ ಪ್ರಮುಖವಾಗಿದೆ. ಇಂದು ಜಗತ್ತಿನಾದ್ಯಂತ ಬಹು ಬೇಡಿಕೆಯ ಉದ್ಯಮವಾಗಿ ಬೆಳೆದು ನಿಂತುದರಲ್ಲಿ ಗಾಂಧೀಜಿಯವರ ಸ್ವಾವಲಂಬಿ ತತ್ವ ಅಡಿಪಾಯವಾಗಿದೆ.
ಸಮಾಜದಲ್ಲಿ ಎಲ್ಲವೂ ಸರಿಯಾಗಿರಬೇಕೆಂದರೆ  ಸಾಮಾಜಿಕ ಸಾಮರಸ್ಯ ಬಹಳ ಮುಖ್ಯ. ಸ್ವಾಸ್ಥ್ಯ ಸಮಾಜಕ್ಕೆ  ಇದು ಬಹಳ ಅಗತ್ಯ. ಜಾತಿ, ಧರ್ಮಗಳ ಅಸಹಿಷ್ಣುತೆ ಸಲ್ಲ.  ಇಲ್ಲಿ ಎಲ್ಲರೂ ಸಮಾನರು. ಇದು ಅಂದಿಗೂ ಇಂದಿಗೂ ಪ್ರಸ್ತುತವೇ.
ಸಸ್ಯಾಹಾರ ಹಾಗೂ ಉಪವಾಸ ಆರೋಗ್ಯದ ಮೇಲೆ ಪ್ರಭಾವ ಬೀರುವ ಪ್ರಮುಖ ಅಂಶಗಳು. ಇವು  ಹೋರಾಟದ ಅಸ್ತ್ರ ಗಳು ಕೂಡ.  ಈ ಅಸ್ತ್ರವನ್ನು ಬ್ರಿಟಿಷ್ ರ ವಿರುದ್ಧದ ಹೋರಾಟದಲ್ಲಿ  ಗಾಂಧೀಜಿಯವರು ಸಮರ್ಥವಾಗಿ ಬಳಸಿದರು.
ಅಸ್ಪೃಶ್ಯತೆ, ಅಸಮಾನತೆ  ಸಮಾಜದ ಅಭಿವೃದ್ಧಿ ಯಲ್ಲಿ ದೊಡ್ಡ ತೊಡಕು. ಇದು ಮನಸ್ಸಿನ ಕೊಳಕಿಗೆ ಹಿಡಿದ ಕನ್ನಡಿ. ಎಲ್ಲರೂ ಸಮಾನರು , ಜಾತಿ , ಮತಗಳೆಲ್ಲವೂ ದೇಶದ ಹಿತದ ಮುಂದೆ ಗೌಣವೆಂಬ ದೃಷ್ಟಿ ಕೋನ ಬೆಳೆಯದಿದ್ದರೆ ಅಭಿವೃದ್ಧಿ ಅಸಾಧ್ಯ.
ಸ್ವಾತಂತ್ರ್ಯ ನಂತರ ಗಾಂಧೀಜಿ ಹಾಗೂ ಖಾದಿ ರಾಜಕೀಯ ಓಟು ಬ್ಯಾಂಕ್ ನ ಅಸ್ತ್ರ ವಾಗಿ ದುರುಪಯೋಗವಾಗುತ್ತಿರುವುದು ಮಾತ್ರ ನಂಬಲೇ ಬೇಕಾದ ಸತ್ಯ.!
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

6 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

18 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

20 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago