ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

August 15, 2021
4:24 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

Advertisement
Advertisement

ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ಮಾತನಾಡಿ,”ಅನೇಕ ಹೋರಾಟಗಾರರ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು. ಈಗ ದೇಶದಲ್ಲಿ ಕಂಡುಬರುತ್ತಿರುವ ಭ್ರಷ್ಟಾಚಾರ ಮುಕ್ತವಾಗಬೇಕಿದೆ. ಇದಕ್ಕೆ ಹಳ್ಳಿಯಿಂದ ಹೆಜ್ಜೆ ಆರಂಭವಾಗಬೇಕಿದೆ. ಹೀಗಾಗಿ ದೇಶಭಕ್ತಿ ಒಂದು ದಿನ ಕಾಣಬೇಕಾದ್ದಲ್ಲ. ಅದು ಕಲಿಸಿ ಬರುವಂತಾದ್ದೂ ಅಲ್ಲ. ಸದಾ ನಮ್ಮಲ್ಲಿ ಇರಬೇಕಾದ್ದು ಎಂದರು.

ಮುಖ್ಯ ಅತಿಥಿಗಳಾಗಿ  ಸಾಮಾಜಿಕ ಮುಖಂಡ ಅಶೋಕ್ ನೆಕ್ರಾಜೆ ಮಾತನಾಡಿ,” ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದೆ. ಆದರೆ ಹಳ್ಳಿಗಳು ಇನ್ನೂ ಅಭಿವೃದ್ಧಿ ಪಥದಲ್ಲಿ  ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಯ ನೆಲೆಯಲ್ಲಿ ಮುಂದಿನ ಹೆಜ್ಜೆ ಬೇಕಿದೆ. ಹೀಗಾಗಿ ವೈಚಾರಿಕವಾಗಿ ಪ್ರತೀ ವ್ಯಕ್ತಿ ಬೆಳೆಯಲು ಗಾಂಧಿ ವಿಚಾರ ವೇದಿಕೆಯ ಅಗತ್ಯವಿದೆ ” ಎಂದರು.

Advertisement

ಕ್ರೈಸ್ತ ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಮಾತನಾಡಿ,” ಎಲ್ಲರೂ ಜನ ಸೇವೆಗೆ ಮಹತ್ವ ಕೊಟ್ಟು ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು. ಅದೇ ಗಾಂಧೀಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಗಾಂಧಿ ವಿಚಾರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ  ಅಚ್ಚುತ ಮಲ್ಕಜೆ ಸ್ವಾಗತಿಸಿ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ್ ಗಬ್ಲಡ್ಕ ಕಾರ್ಯಕ್ರಮ ನಿರೂಪಿಸಿ, ಉಜಿತ್ ಶ್ಯಾಮ್ ಚಿಕ್ಮುಳಿ ವಂದಿಸಿದರು.

 

Advertisement

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ
June 9, 2025
9:24 PM
by: ದ ರೂರಲ್ ಮಿರರ್.ಕಾಂ
ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ
June 9, 2025
9:11 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ
June 9, 2025
9:04 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|
June 9, 2025
11:23 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group