ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

August 15, 2021
4:24 PM

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ಮಾತನಾಡಿ,”ಅನೇಕ ಹೋರಾಟಗಾರರ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು. ಈಗ ದೇಶದಲ್ಲಿ ಕಂಡುಬರುತ್ತಿರುವ ಭ್ರಷ್ಟಾಚಾರ ಮುಕ್ತವಾಗಬೇಕಿದೆ. ಇದಕ್ಕೆ ಹಳ್ಳಿಯಿಂದ ಹೆಜ್ಜೆ ಆರಂಭವಾಗಬೇಕಿದೆ. ಹೀಗಾಗಿ ದೇಶಭಕ್ತಿ ಒಂದು ದಿನ ಕಾಣಬೇಕಾದ್ದಲ್ಲ. ಅದು ಕಲಿಸಿ ಬರುವಂತಾದ್ದೂ ಅಲ್ಲ. ಸದಾ ನಮ್ಮಲ್ಲಿ ಇರಬೇಕಾದ್ದು ಎಂದರು.

ಮುಖ್ಯ ಅತಿಥಿಗಳಾಗಿ  ಸಾಮಾಜಿಕ ಮುಖಂಡ ಅಶೋಕ್ ನೆಕ್ರಾಜೆ ಮಾತನಾಡಿ,” ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದೆ. ಆದರೆ ಹಳ್ಳಿಗಳು ಇನ್ನೂ ಅಭಿವೃದ್ಧಿ ಪಥದಲ್ಲಿ  ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಯ ನೆಲೆಯಲ್ಲಿ ಮುಂದಿನ ಹೆಜ್ಜೆ ಬೇಕಿದೆ. ಹೀಗಾಗಿ ವೈಚಾರಿಕವಾಗಿ ಪ್ರತೀ ವ್ಯಕ್ತಿ ಬೆಳೆಯಲು ಗಾಂಧಿ ವಿಚಾರ ವೇದಿಕೆಯ ಅಗತ್ಯವಿದೆ ” ಎಂದರು.

ಕ್ರೈಸ್ತ ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಮಾತನಾಡಿ,” ಎಲ್ಲರೂ ಜನ ಸೇವೆಗೆ ಮಹತ್ವ ಕೊಟ್ಟು ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು. ಅದೇ ಗಾಂಧೀಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಗಾಂಧಿ ವಿಚಾರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ  ಅಚ್ಚುತ ಮಲ್ಕಜೆ ಸ್ವಾಗತಿಸಿ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ್ ಗಬ್ಲಡ್ಕ ಕಾರ್ಯಕ್ರಮ ನಿರೂಪಿಸಿ, ಉಜಿತ್ ಶ್ಯಾಮ್ ಚಿಕ್ಮುಳಿ ವಂದಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?
September 10, 2026
11:29 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror