Advertisement

ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ಮಾತನಾಡಿ,”ಅನೇಕ ಹೋರಾಟಗಾರರ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು. ಈಗ ದೇಶದಲ್ಲಿ ಕಂಡುಬರುತ್ತಿರುವ ಭ್ರಷ್ಟಾಚಾರ ಮುಕ್ತವಾಗಬೇಕಿದೆ. ಇದಕ್ಕೆ ಹಳ್ಳಿಯಿಂದ ಹೆಜ್ಜೆ ಆರಂಭವಾಗಬೇಕಿದೆ. ಹೀಗಾಗಿ ದೇಶಭಕ್ತಿ ಒಂದು ದಿನ ಕಾಣಬೇಕಾದ್ದಲ್ಲ. ಅದು ಕಲಿಸಿ ಬರುವಂತಾದ್ದೂ ಅಲ್ಲ. ಸದಾ ನಮ್ಮಲ್ಲಿ ಇರಬೇಕಾದ್ದು ಎಂದರು.

ಮುಖ್ಯ ಅತಿಥಿಗಳಾಗಿ  ಸಾಮಾಜಿಕ ಮುಖಂಡ ಅಶೋಕ್ ನೆಕ್ರಾಜೆ ಮಾತನಾಡಿ,” ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದೆ. ಆದರೆ ಹಳ್ಳಿಗಳು ಇನ್ನೂ ಅಭಿವೃದ್ಧಿ ಪಥದಲ್ಲಿ  ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಯ ನೆಲೆಯಲ್ಲಿ ಮುಂದಿನ ಹೆಜ್ಜೆ ಬೇಕಿದೆ. ಹೀಗಾಗಿ ವೈಚಾರಿಕವಾಗಿ ಪ್ರತೀ ವ್ಯಕ್ತಿ ಬೆಳೆಯಲು ಗಾಂಧಿ ವಿಚಾರ ವೇದಿಕೆಯ ಅಗತ್ಯವಿದೆ ” ಎಂದರು.

ಕ್ರೈಸ್ತ ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಮಾತನಾಡಿ,” ಎಲ್ಲರೂ ಜನ ಸೇವೆಗೆ ಮಹತ್ವ ಕೊಟ್ಟು ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು. ಅದೇ ಗಾಂಧೀಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಗಾಂಧಿ ವಿಚಾರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ  ಅಚ್ಚುತ ಮಲ್ಕಜೆ ಸ್ವಾಗತಿಸಿ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ್ ಗಬ್ಲಡ್ಕ ಕಾರ್ಯಕ್ರಮ ನಿರೂಪಿಸಿ, ಉಜಿತ್ ಶ್ಯಾಮ್ ಚಿಕ್ಮುಳಿ ವಂದಿಸಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

3 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

8 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

20 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

2 days ago