Advertisement

ಗಾಂಧಿ ವಿಚಾರ ವೇದಿಕೆಯಿಂದ ಸ್ವಾತಂತ್ರ್ಯ ದಿನಾಚರಣೆ | ಗ್ರಾಮೀಣ ಭಾರತವು ಗಟ್ಟಿಯಾದಾಗ ಸ್ವಾತಂತ್ರ್ಯ ಸಂಭ್ರಮ ಇಮ್ಮಡಿ |

Share

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆಯಲ್ಲಿ  ಗಾಂಧಿ ವಿಚಾರ ವೇದಿಕೆಯ ಸುಳ್ಯ ಘಟಕದಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಧ್ವಜಾರೋಹಣಗೈದು  ಮಾತನಾಡಿದ ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಕಾರ್ಯಪ್ಪ ಗೌಡ ಚಿಕ್ಮುಳಿ ಮಾತನಾಡಿ,”ಅನೇಕ ಹೋರಾಟಗಾರರ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಯಿತು. ಈಗ ದೇಶದಲ್ಲಿ ಕಂಡುಬರುತ್ತಿರುವ ಭ್ರಷ್ಟಾಚಾರ ಮುಕ್ತವಾಗಬೇಕಿದೆ. ಇದಕ್ಕೆ ಹಳ್ಳಿಯಿಂದ ಹೆಜ್ಜೆ ಆರಂಭವಾಗಬೇಕಿದೆ. ಹೀಗಾಗಿ ದೇಶಭಕ್ತಿ ಒಂದು ದಿನ ಕಾಣಬೇಕಾದ್ದಲ್ಲ. ಅದು ಕಲಿಸಿ ಬರುವಂತಾದ್ದೂ ಅಲ್ಲ. ಸದಾ ನಮ್ಮಲ್ಲಿ ಇರಬೇಕಾದ್ದು ಎಂದರು.

ಮುಖ್ಯ ಅತಿಥಿಗಳಾಗಿ  ಸಾಮಾಜಿಕ ಮುಖಂಡ ಅಶೋಕ್ ನೆಕ್ರಾಜೆ ಮಾತನಾಡಿ,” ದೇಶಕ್ಕೆ ಸ್ವಾತಂತ್ರ್ಯ ಲಭ್ಯವಾಗಿದೆ. ಆದರೆ ಹಳ್ಳಿಗಳು ಇನ್ನೂ ಅಭಿವೃದ್ಧಿ ಪಥದಲ್ಲಿ  ಕಾಣಬೇಕಿದೆ. ಹೀಗಾಗಿ ಅಭಿವೃದ್ಧಿಯ ನೆಲೆಯಲ್ಲಿ ಮುಂದಿನ ಹೆಜ್ಜೆ ಬೇಕಿದೆ. ಹೀಗಾಗಿ ವೈಚಾರಿಕವಾಗಿ ಪ್ರತೀ ವ್ಯಕ್ತಿ ಬೆಳೆಯಲು ಗಾಂಧಿ ವಿಚಾರ ವೇದಿಕೆಯ ಅಗತ್ಯವಿದೆ ” ಎಂದರು.

ಕ್ರೈಸ್ತ ಅಲ್ಪಸಂಖ್ಯಾತ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿಟ್ಟಿ ಬಿ. ನೆಡುನೀಲಂ ಮಾತನಾಡಿ,” ಎಲ್ಲರೂ ಜನ ಸೇವೆಗೆ ಮಹತ್ವ ಕೊಟ್ಟು ಎಲ್ಲರನ್ನೂ ಪ್ರೀತಿಯಿಂದ ಕಾಣುವಂತಾಗಬೇಕು. ಅದೇ ಗಾಂಧೀಜಿಯವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

ಗಾಂಧಿ ವಿಚಾರ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷ  ಅಚ್ಚುತ ಮಲ್ಕಜೆ ಸ್ವಾಗತಿಸಿ ಗಾಂಧಿ ವಿಚಾರ ವೇದಿಕೆಯ ತಾಲೂಕು ಅಧ್ಯಕ್ಷ ಲಕ್ಷ್ಮೀಶ್ ಗಬ್ಲಡ್ಕ ಕಾರ್ಯಕ್ರಮ ನಿರೂಪಿಸಿ, ಉಜಿತ್ ಶ್ಯಾಮ್ ಚಿಕ್ಮುಳಿ ವಂದಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

5 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

5 hours ago

ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ

ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…

8 hours ago

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

18 hours ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

23 hours ago