Advertisement
MIRROR FOCUS

ನಮ್ಮ_ಗಣೇಶ | ಗಣೇಶ ಚತುರ್ಥಿ ಹಬ್ಬದ ಸಡಗರ | ಬಾಲಗಣಪನೂ ಇಲ್ಲಿದ್ದಾನೆ‌ ನೋಡಿ…! | ಜಾತಿ, ಮತ, ಧರ್ಮಗಳನ್ನು ಮೀರಿ ಸಂಭ್ರಮಿಸುವ ಹಬ್ಬ |

Share

ಗಜಾನನಂ ಭೂತಗಣಾಧಿ ಸೇವಿತಂ
ಕಪಿತ್ಥ ಜಂಭೂಫಲ ಸಾರಭಕ್ಷಿತಂ
ಉಮಾಸುತಂ ಶೋಕವಿನಾಶ ಕಾರಕಂ
ನಮಾಮಿ ವಿಘ್ನೇಶ್ವರ ಪಾದಪಂಕಜಂ”

(ಮಂಗಳೂರಿನ ಶ್ರೀಗೌರಿ ಆರ್‌ ಪೈ ಹಾಡಿರುವ ಬಾಲಗಣಪನ ಹಾಡು )

ಹೊಸತನ್ನು ಆರಂಭಿಸುವಾಗ, ಕಾರ್ಯಕ್ರಮದ ಮೊದಲಿಗೆ ನೆನಪಾಗುವುದು ಪ್ರಥಮವಂದಿತನನ್ನೇ. ಮನಸು ಖಾಲಿಯಾದಾಗ, ಎಲ್ಲವೂ ಶೂನ್ಯವೆನಿಸಿದಾಗ, ಇನ್ನು ಏನೂ ಉಳಿದಿಲ್ಲವೆನಿಸುವಾಗಲೂ ನೆನಪಾಗುವುದು ಅವನನ್ನೇ ಗಜಪತಿಯನ್ನು. ಮಕ್ಕಳ ಪ್ರೀತಿಯ ಗಣಪ , ನೆನದವರ ಮನದಲ್ಲಿ ಸದಾ ನೆಲೆಸಿರುವ ವಿಘ್ನನಿವಾರಕನವನು.‌

ಯಾರಿಗಾದರೂ ಉಡುಗೊರೆ ತೆಗೆದುಕೊಳ್ಳಲು ಅಂಗಡಿಗೆ ಹೋದಾಗ ಕಣ್ಣಿಗೆ ಬೀಳುವುದು ತರಹೇವಾರಿ ಗಣಪತಿ ವಿಗ್ರಹಗಳೇ. ಒಂದೊಮ್ಮೆ ಈ ಬಾರಿ ಗಣೇಶ ಬೇಡ ಬೇರೆ ಏನಾದರೂ ತಗೊಳ್ಳುವುದೇ ಎಂದು ಮನಸ್ಸು ಗಟ್ಟಿ ಮಾಡಿದರೂ ಆಚೆ ,ಈಚೆ ತಿರುಗಿ ಕೊನೆಗೆ ಆಯ್ದುಕೊಳ್ಳುವುದು ಮತ್ತೆ ಗಣೇಶನನ್ನೇ. ಯಾಕೋ ಗಣೇಶನಿಗೆ ಸಂಭಂದಿಸಿದ್ದು ಕೊಡುವುದೆಂದರೆ ಮನಸಿಗೇನೋ ಸಮಾಧಾನ.

ಗಣೇಶನ ಹಬ್ಬ ಜಗತ್ತಿನಾದ್ಯಂತ ಆಚರಿಸ್ಪಡುವ ಹಬ್ಬ. ಜಾತಿ, ಮತ, ಧರ್ಮಗಳನ್ನು ಮೀರಿ ಸಂಭ್ರಮಿಸುವ ಹಬ್ಬ. ಮಕ್ಕಳಿಗಂತೂ ಗೌಜಿಯ ಹಬ್ಬ. ನಾವು ಶಾಲೆಗೆ ಹೋಗುವ ಸಂಧರ್ಭದಲ್ಲಿ ಗಣಪತಿಯ ಮೂರ್ತಿ ಶಾಲೆಯಲ್ಲೇ ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತಿತ್ತು. ತಳಿರು ತೋರಣಗಳನ್ನು ದಾರಿಯುದ್ದಕ್ಕೂ ಕಟ್ಟುತ್ತಿದ್ದೆವು. ಪೂಜೆ ಭಜನೆ ಕುಣಿತ, ಮೆರವಣಿಗೆಗಳಲ್ಲಿ ಊರಿನ , ದೊಡ್ಡವರು, ಸಣ್ಣವರೆಲ್ಲರು ಭಾಗವಹಿಸುತ್ತಾ ಆನಂದ ಪಡುತ್ತಿದ್ದೆವು.

ಮನೆ, ಮನೆಯಲ್ಲಿ ಆರಾಧನೆ ಗೊಳ್ಳುತ್ತಿದ್ದ ಗಣೇಶ ಸಾರ್ವಜನಿಕವಾಗಿ ಪೂಜಿಸಲ್ಪಟ್ಟುದರ ಹಿಂದೆ ರೋಚಕ ಹೋರಾಟದ ಕಥೆಯೇ ಇದೆ. ಅದರ ಹಿಂದೆ ದೊಡ್ಡ ಉದ್ದೇಶವೇ ಇತ್ತು. 1892 ರ ಸಮಯ ದೇಶ ಬ್ರಿಟಿಷ್ ರ ಆಳ್ವಿಕೆಯಲ್ಲಿತ್ತು. ಅಗಾಧವಾದ ಜಾತಿ ತಾರತಮ್ಯವೂ ಇತ್ತು. ಸಮಾಜದ ಜನರಲ್ಲಿ ಒಗ್ಗಟ್ಟು ಇರಲಿಲ್ಲ. ಜಾತಿ ವೈಷಮ್ಯ , ಬ್ರಿಟಿಷ್‌ ಆಡಳಿತದ ವಿರುದ್ಧ ಹೋರಾಟಕ್ಕೆ ಒಂದಾಗಲು ದೊಡ್ಡ ಅಡ್ಡಿಯಾಗಿತ್ತು. ಇದರ ನಿವಾರಣೆಗಾಗಿ ಒಂದು ಉಪಾಯದ ಅಗತ್ಯ ಬಹುವಾಗಿತ್ತು. ಮನೆಯೊಳಗೆ, ದೇವಸ್ಥಾನಗಳಲ್ಲಿ ಪೂಜಿಸಲ್ಪಡುತ್ತಿದ್ದ ಗಣಪನ ಆರಾಧನೆಯನ್ನು ಸಾರ್ವಜನಿಕವಾಗಿ ಎಲ್ಲರೂ ಒಟ್ಡಾಗಿ ಪೂಜಿಸಿದರೆ ಹೇಗೆ ಎಂಬ ಕಲ್ಪನೆ ಮುಖಂಡರನ್ನು ಕಾಡಿತು. ಆರಂಭಿಕವಾಗಿ 1892 ರಲ್ಲಿ ಮಹಾರಾಷ್ಟ್ರ ದಲ್ಲಿ ಬಾವ್ ಸಾಹೇಬ ಲಕ್ಷ್ಮಣ ಜವೇರಿಯವರು ಪ್ರಥಮ ಬಾರಿಗೆ ಸಾರ್ವಜನಿಕ ಗಣೇಶೋತ್ಸವ ಮಾಡಿದರು. ಇದರ ಬಗ್ಗೆ ಸ್ಪಷ್ಟ ಪರಿಕಲ್ಪನೆಯನ್ನು 1892 ರಲ್ಲಿ ತಮ್ಮ ಕೇಸರಿ ಪತ್ರಿಕೆಯಲ್ಲಿ ಪ್ರಕಟಿಸಿದರು. ಆಮೇಲೆ 1894 ರಲ್ಲಿ ಪುಣೆಯ ಕೇಸರಿವಾಡದಲ್ಲಿ ಅಧಿಕೃತವಾಗಿ ಸಾರ್ವಜನಿಕ ಗಣೇಶೋತ್ಸವ ಆರಂಭವಾಯಿತು. ಇಲ್ಲಿ ಜಾತಿ , ಮತ ಭೇದಗಳನ್ನು ಮರೆತು ಜನ ಒಂದಾದರು. ದೇವರ ಆರಾಧನಾ ಉತ್ಸವ ಜನರು ಒಗ್ಗೂಡಲು ಒಂದು ಕಾರಣವಾಯಿತು. ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಧ್ಯೇಯ ವಾಕ್ಯದ ಅರ್ಥ ಜನರಲ್ಲಿ ಜಾಗೃತಿಯುಂಟು ಮಾಡಿತು. ನಾಯಕರ ಕನಸು ಈಡೇರಿತು.

ಗಣೇಶನೆಂದರೆ ಅಲಂಕಾರಪ್ರಿಯ. ಇಂದು ಹಲವು ರೀತಿಯಲ್ಲಿ ಆತನ ಮೂರ್ತಿಗಳನ್ನು ತಯಾರಿಸಲಾಗುತ್ತದೆ.‌ ಸುವರ್ಣ,ರಜತ, ಕಂಚು, ಪಂಚಲೋಹ , ಶಿಲೆ, ಕಾಷ್ಠ, ಕಡುಶರ್ಕರ, ಗೋಮಯ, ಜೇಡಿ ಮಣ್ಣಿನಿಂದ ತಯಾರಿಸಲಾಗುತ್ತದೆ. ಆದರೆ ಚೌತಿಯ ಸಮಯದಲ್ಲಿ ಆರಾಧಿಸಲು ಯೋಗ್ಯವಾದುದು ಗೋಮಯದ ಮೂರ್ತಿ , ಅಥವಾ ಮಣ್ಣಿನ ಮೂರ್ತಿ. ಪೂಜಿಸಿ ವಿಸರ್ಜಿಸಲು ಅನುಕೂಲಕರವಾದುದರಿಂದ ಹೆಚ್ಚಾಗಿ ಇವುಗಳಿಂದ ಮಾಡಿದ ಮೂರ್ತಿಗಳನ್ನು ಬಳಸುವುದೇ ಸೂಕ್ತ. ಪ್ರಾಕೃತಿಕವಾಗಿ ಸಿಗುವ ವಸ್ತುಗಳಿಂದ ಬಣ್ಣ ಹಾಗೂ ನೈಸರ್ಗಿಕವಾದ ಹೂವು , ಗರಿಕೆಗಳಿಂದ ಮಾಡಿದ ಅಲಂಕಾರವೇ ಚೆಂದ.

ಮೋದಕಪ್ರಿಯ ಗಣಪತಿಗೆ ಹಲವು ಬಗೆಯ ನೈವೇದ್ಯ ಗಳನ್ನು ಸಮರ್ಪಿಸುವುದೇ ಒಂದು ಖುಷಿ. ಪಂಚಕಜ್ಜಾಯ, ಅಪ್ಪ ನೈವೇದ್ಯ, ಮೋದಕ, ಪಾಯಸ, ಕಡುಬು, ಚಕ್ಕುಲಿ, ಖರ್ಜಿಕಾಯಿ, ಇಡ್ಲಿ, ರಸಾಯನ, ಬಾಳೆಹಣ್ಣು ಹೀಗೆ ಎಷ್ಟು ನಮೂನೆ ಮಾಡಿದರೂ ಕಮ್ಮಿಯೇ. ಭಕ್ತಿಯಿಂದ ಗರಿಕೆ ಸಮರ್ಪಿಸಿದರೂ ಗಣಪನಿಗೆ ಇಷ್ಟವೇ.‌
ಈ ಬಾರಿ ಕಟ್ಟುನಿಟ್ಟಿನ ಶರತ್ತುಗಳೊಂದಿಗೆ ಚೌತಿಯನ್ನು ಆಚರಿಸಬೇಕೆಂಬ ನಿಯಮವಿದೆ. ಕೊರೋನಾ ಕಾಲಘಟ್ಟದಲ್ಲಿ ನಾವು ಜಾಗರೂಕತೆಯಿಂದ. ಹಬ್ಬ ಮಾಡ ಬೇಕಾದ ಅನಿವಾರ್ಯತೆ ಇದೆ. ಭಕ್ತಿ , ಭಾವಕ್ಕೆ ಯಾವ ಅಡ್ಡಿಯೂ ಇರದು, ಆಡಂಬರಕ್ಕೆ ಮಾತ್ರ ಕಡಿವಾಣ. ಮನಃಪೂರ್ವಕವಾಗಿ ಗಣೇಶನಲ್ಲಿ ಕೊರೋನಾ ಕಂಟಕವನ್ನು ನಿವಾರಿಸಿ, ಇಡೀ ಜಗತ್ತಿಗೆ ಒಳಿತುಂಟುಮಾಡು ವಿಘ್ನನಿವಾರಕನೇ …..

#ಅಶ್ವಿನಿಮೂರ್ತಿ ಅಯ್ಯನಕಟ್ಟೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago