Advertisement
The Rural Mirror ಕಾಳಜಿ

#ನಮ್ಮ_ಗಣೇಶ | ಕೊರೋನಾ ನಡುವೆ ಬದುಕಿಗಿರಲಿ ನೆಮ್ಮದಿ | ಗಣೇಶ ಹಬ್ಬ ಆಚರಿಸೋಣ- ಸಂಭ್ರಮಿಸೋಣ |

Share

ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್‌ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.

Advertisement
Advertisement
Advertisement
Advertisement
ಆದರೆ, ಕಳೆದ ಎರಡು ವರ್ಷಗಳಿಂದ ಶ್ರೀಕೃಷ್ಣಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಆಚರಣೆ ಸಾರ್ವಜನಿಕವಾಗಿ ಇಲ್ಲವಾಗಿದೆ. ಕಾರಣ ಕೊರೋನಾ ವೈರಸ್.‌ ಒಂದು ಸಣ್ಣ ವೈರಸ್‌, ಕಣ್ಣಿಗೆ ಕಾಣದ ಜೀವಿ ಅನೇಕ ಸಂದಿಗ್ಧತೆಯನ್ನು ತಂದಿಟ್ಟಿತು. ಈ ಬಾರಿಯೂ ಗಣೇಶೋತ್ಸವ ಸರಳವಾಗಿ ಆಚರಣೆಯಾಗುತ್ತಿದೆ. ಒಂದು ಕಾಲದಲ್ಲಿ ಗಣೇಶೋತ್ಸವೆಂದರೆ ಸಮಾಜದ ಸಂಘಟನೆ ಎಂದೇ ಆಚರಿಸಲಾಗಿತ್ತಿತ್ತು. ಆದರೆ ಈಗ ಕಾಲದ ಪರಿಸ್ಥಿತಿ ಬದಲಾಯಿಸಿ ಬಿಟ್ಟಿತು. ಆದರೆ ಹಬ್ಬಗಳ ಆಚರಣೆ ನಡೆಯಬೇಕು, ಸರಳವಾಗಿ ಆಚರಿಸಿ ನಾವು ಸಂಭ್ರಮವನ್ನು ಹಂಚಿಕೊಳ್ಳೋಣ, ಸುಖ, ದು:ಖಗಳನ್ನು  ಹಂಚಿಕೊಳ್ಳೋಣ, ಸಾಧ್ಯವಾದರೆ ನಮ್ಮೂರಿಗೆ, ನಮ್ಮೂರಿನ ನಮ್ಮವರಿಗಾಗಿ ಒಳ್ಳೆಯದು ಮಾಡೋಣ.
Advertisement

ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ  ನಾವೆಲ್ಲಾ ಸೇರಿ  ಹೀಗೆ ಸಂಭ್ರಮಿಸೋಣ……

ಮನೆಯಲ್ಲಿ ಆಚರಿಸಿದ ಗಣೇಶ ಚೌತಿ, ಸಾರ್ವಜನಿಕವಾಗಿ ಭಾಗವಹಿಸುವ ಗಣೇಶ ಚೌತಿಯ ಬಗ್ಗೆ ಒಂದು ಫೋಟೋ ಹಾಗೂ ಪುಟ್ಟ ಬರಹವನ್ನು‌ ನಮಗೆ ಕಳುಹಿಸಿ.‌ ಇದನ್ನು ಮಿರರ್ ಗ್ರೂಪ್ ನಲ್ಲಿ ನಾವು ಪ್ರಕಟ ಮಾಡುತ್ತೇವೆ, ಎಲ್ಲರೂ ಜೊತೆಯಾಗಿ ಸಂಭ್ರಮಿಸೋಣ. ನಮ್ಮ  ವ್ಯಾಟ್ಸಪ್‌ ಸಂಖ್ಯೆ 9449125447 ಅಥವಾ 8861312447 
ಮಿರರ್‌ ಟೀಂ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

13 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago