ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಆದರೆ, ಕಳೆದ ಎರಡು ವರ್ಷಗಳಿಂದ ಶ್ರೀಕೃಷ್ಣಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಆಚರಣೆ ಸಾರ್ವಜನಿಕವಾಗಿ ಇಲ್ಲವಾಗಿದೆ. ಕಾರಣ ಕೊರೋನಾ ವೈರಸ್. ಒಂದು ಸಣ್ಣ ವೈರಸ್, ಕಣ್ಣಿಗೆ ಕಾಣದ ಜೀವಿ ಅನೇಕ ಸಂದಿಗ್ಧತೆಯನ್ನು ತಂದಿಟ್ಟಿತು. ಈ ಬಾರಿಯೂ ಗಣೇಶೋತ್ಸವ ಸರಳವಾಗಿ ಆಚರಣೆಯಾಗುತ್ತಿದೆ. ಒಂದು ಕಾಲದಲ್ಲಿ ಗಣೇಶೋತ್ಸವೆಂದರೆ ಸಮಾಜದ ಸಂಘಟನೆ ಎಂದೇ ಆಚರಿಸಲಾಗಿತ್ತಿತ್ತು. ಆದರೆ ಈಗ ಕಾಲದ ಪರಿಸ್ಥಿತಿ ಬದಲಾಯಿಸಿ ಬಿಟ್ಟಿತು. ಆದರೆ ಹಬ್ಬಗಳ ಆಚರಣೆ ನಡೆಯಬೇಕು, ಸರಳವಾಗಿ ಆಚರಿಸಿ ನಾವು ಸಂಭ್ರಮವನ್ನು ಹಂಚಿಕೊಳ್ಳೋಣ, ಸುಖ, ದು:ಖಗಳನ್ನು ಹಂಚಿಕೊಳ್ಳೋಣ, ಸಾಧ್ಯವಾದರೆ ನಮ್ಮೂರಿಗೆ, ನಮ್ಮೂರಿನ ನಮ್ಮವರಿಗಾಗಿ ಒಳ್ಳೆಯದು ಮಾಡೋಣ.ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…