ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.
ಆದರೆ, ಕಳೆದ ಎರಡು ವರ್ಷಗಳಿಂದ ಶ್ರೀಕೃಷ್ಣಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಆಚರಣೆ ಸಾರ್ವಜನಿಕವಾಗಿ ಇಲ್ಲವಾಗಿದೆ. ಕಾರಣ ಕೊರೋನಾ ವೈರಸ್. ಒಂದು ಸಣ್ಣ ವೈರಸ್, ಕಣ್ಣಿಗೆ ಕಾಣದ ಜೀವಿ ಅನೇಕ ಸಂದಿಗ್ಧತೆಯನ್ನು ತಂದಿಟ್ಟಿತು. ಈ ಬಾರಿಯೂ ಗಣೇಶೋತ್ಸವ ಸರಳವಾಗಿ ಆಚರಣೆಯಾಗುತ್ತಿದೆ. ಒಂದು ಕಾಲದಲ್ಲಿ ಗಣೇಶೋತ್ಸವೆಂದರೆ ಸಮಾಜದ ಸಂಘಟನೆ ಎಂದೇ ಆಚರಿಸಲಾಗಿತ್ತಿತ್ತು. ಆದರೆ ಈಗ ಕಾಲದ ಪರಿಸ್ಥಿತಿ ಬದಲಾಯಿಸಿ ಬಿಟ್ಟಿತು. ಆದರೆ ಹಬ್ಬಗಳ ಆಚರಣೆ ನಡೆಯಬೇಕು, ಸರಳವಾಗಿ ಆಚರಿಸಿ ನಾವು ಸಂಭ್ರಮವನ್ನು ಹಂಚಿಕೊಳ್ಳೋಣ, ಸುಖ, ದು:ಖಗಳನ್ನು ಹಂಚಿಕೊಳ್ಳೋಣ, ಸಾಧ್ಯವಾದರೆ ನಮ್ಮೂರಿಗೆ, ನಮ್ಮೂರಿನ ನಮ್ಮವರಿಗಾಗಿ ಒಳ್ಳೆಯದು ಮಾಡೋಣ.ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ ನಾವೆಲ್ಲಾ ಸೇರಿ ಹೀಗೆ ಸಂಭ್ರಮಿಸೋಣ……
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…