Advertisement
The Rural Mirror ಕಾಳಜಿ

#ನಮ್ಮ_ಗಣೇಶ | ಕೊರೋನಾ ನಡುವೆ ಬದುಕಿಗಿರಲಿ ನೆಮ್ಮದಿ | ಗಣೇಶ ಹಬ್ಬ ಆಚರಿಸೋಣ- ಸಂಭ್ರಮಿಸೋಣ |

Share

ಹಬ್ಬಗಳೆಲ್ಲಾ ಒಂದಾಗಿ, ಒಟ್ಟಾಗಿ ಆಚರಿಸುವ, ಸಂಭ್ರಮಿಸುವ ಕಾಲ. ಪ್ರತೀ ದಿನವೂ ಒಂದಾಗದೇ ಇದ್ದರೂ ಹಬ್ಬದ ಸಮಯದಲ್ಲಿ ಕುಟುಂಬದ ಮಂದಿ, ಊರಿನ ಮಂದಿ ಒಂದಾಗಿ ಸುಖ-ದು:ಖಗಳನ್ನು ಹಂಚಿಕೊಳ್ಳುವ, ಸಾಂತ್ವನ, ನೆಮ್ಮದಿಯನ್ನು ತಂದುಕೊಳ್ಳುವ ದಿನವಾಗಿಯೂ ಇರುತ್ತದೆ. ಹೀಗಾಗಿ ಯಾವುದೇ ಹಬ್ಬ, ಆಚರಣೆ, ನಂಬಿಕೆಗಳು ಮನುಷ್ಯದ ಬದುಕಿಗೆ ಪಾಸಿಟಿವ್‌ ಸಂದೇಶಗಳನ್ನು ನೀಡುವ, ಬದುಕನ್ನು ಗಟ್ಟಿ ಮಾಡುವ, ಬದುಕಿಗೆ ಧೈರ್ಯ ತುಂಬುವ ದಿನವೂ ಹೌದು.

ಆದರೆ, ಕಳೆದ ಎರಡು ವರ್ಷಗಳಿಂದ ಶ್ರೀಕೃಷ್ಣಜನ್ಮಾಷ್ಟಮಿ, ಶ್ರೀ ಗಣೇಶೋತ್ಸವ ಆಚರಣೆ ಸಾರ್ವಜನಿಕವಾಗಿ ಇಲ್ಲವಾಗಿದೆ. ಕಾರಣ ಕೊರೋನಾ ವೈರಸ್.‌ ಒಂದು ಸಣ್ಣ ವೈರಸ್‌, ಕಣ್ಣಿಗೆ ಕಾಣದ ಜೀವಿ ಅನೇಕ ಸಂದಿಗ್ಧತೆಯನ್ನು ತಂದಿಟ್ಟಿತು. ಈ ಬಾರಿಯೂ ಗಣೇಶೋತ್ಸವ ಸರಳವಾಗಿ ಆಚರಣೆಯಾಗುತ್ತಿದೆ. ಒಂದು ಕಾಲದಲ್ಲಿ ಗಣೇಶೋತ್ಸವೆಂದರೆ ಸಮಾಜದ ಸಂಘಟನೆ ಎಂದೇ ಆಚರಿಸಲಾಗಿತ್ತಿತ್ತು. ಆದರೆ ಈಗ ಕಾಲದ ಪರಿಸ್ಥಿತಿ ಬದಲಾಯಿಸಿ ಬಿಟ್ಟಿತು. ಆದರೆ ಹಬ್ಬಗಳ ಆಚರಣೆ ನಡೆಯಬೇಕು, ಸರಳವಾಗಿ ಆಚರಿಸಿ ನಾವು ಸಂಭ್ರಮವನ್ನು ಹಂಚಿಕೊಳ್ಳೋಣ, ಸುಖ, ದು:ಖಗಳನ್ನು  ಹಂಚಿಕೊಳ್ಳೋಣ, ಸಾಧ್ಯವಾದರೆ ನಮ್ಮೂರಿಗೆ, ನಮ್ಮೂರಿನ ನಮ್ಮವರಿಗಾಗಿ ಒಳ್ಳೆಯದು ಮಾಡೋಣ.

ಹಾಗಿದ್ದರೆ ಈ ಬಾರಿ ಗಣೇಶೋತ್ಸವ ಸರಳವಾಗಿ ಆಚರಣೆ ಇರುತ್ತದೆ, ನಾವು ಆಚರಣೆ ಮಾಡಿದ ಗಣೇಶ ಹಬ್ಬವನ್ನು ಎಲ್ಲರ ಜೊತೆ ಹಂಚಿಕೊಳ್ಳೋಣ, ಇದು ವೈಭವಕ್ಕಾಗಿ ಅಲ್ಲ, ನಮ್ಮ ಸಂತೋಷಕ್ಕಾಗಿ, ಎಲ್ಲರೊಂದಿಗೆ ನಾವಿದ್ದೇವೆ ಎನ್ನುವುದಕ್ಕೆ. ಹೀಗಾಗಿ ಈ  ನಾವೆಲ್ಲಾ ಸೇರಿ  ಹೀಗೆ ಸಂಭ್ರಮಿಸೋಣ……

ಮನೆಯಲ್ಲಿ ಆಚರಿಸಿದ ಗಣೇಶ ಚೌತಿ, ಸಾರ್ವಜನಿಕವಾಗಿ ಭಾಗವಹಿಸುವ ಗಣೇಶ ಚೌತಿಯ ಬಗ್ಗೆ ಒಂದು ಫೋಟೋ ಹಾಗೂ ಪುಟ್ಟ ಬರಹವನ್ನು‌ ನಮಗೆ ಕಳುಹಿಸಿ.‌ ಇದನ್ನು ಮಿರರ್ ಗ್ರೂಪ್ ನಲ್ಲಿ ನಾವು ಪ್ರಕಟ ಮಾಡುತ್ತೇವೆ, ಎಲ್ಲರೂ ಜೊತೆಯಾಗಿ ಸಂಭ್ರಮಿಸೋಣ. ನಮ್ಮ  ವ್ಯಾಟ್ಸಪ್‌ ಸಂಖ್ಯೆ 9449125447 ಅಥವಾ 8861312447 
ಮಿರರ್‌ ಟೀಂ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

5 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago