Advertisement
MIRROR FOCUS

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|

Share

ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ ರಹಿತವಾದ ವಿಗ್ರಹ ತಯಾರಿ ಹಾಗೂ ಗಣೇಶ ಹಬ್ಬವನ್ನು ಆಚರಿಸಿ ಎಂದು ಮನವಿ ಮಾಡುತ್ತಾರೆ. ಈ ನಡುವೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ರೈತ ಮುತ್ತು ಕನ್ನೂರು, ಗೋವಿನ ಸಗಣಿಯಿಂದ ಗೋಮಯ ಗಣೇಶ ಮೂರ್ತಿ ತಯಾರಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.…..ಮುಂದೆ ಓದಿ….

ಪ್ರತಿ ವರ್ಷವೂ ಪರಿಸರ ಸ್ನೇಹಿ ಗೋವಿನ ಸಗಣಿಯಿಂದ ಗಣೇಶನ ಮೂರ್ತಿ ತಯಾರಿಸುತ್ತಿದ್ದು, ರಾಜ್ಯ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲೂ ಈ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆಯಿದೆ.ಗೋಮಯ ಗಣೇಶ ಮೂರ್ತಿಯಿಂದ ಪರಿಸರಕ್ಕೆ ಯಾವುದೇ ಹಾನಿಯಿಲ್ಲ. ಈ ಮೂರ್ತಿಯನ್ನು ಒಂದು ಬಕೆಟ್ ನಲ್ಲಿ ವಿಸರ್ಜಿಸಿದರೆ ಆದು ಸಂಪೂರ್ಣ ಕರಗಿ ಗೊಬ್ಬರದ ರೂಪದಲ್ಲಿ ಮತ್ತೆ ಗಿಡ – ಸಸಿಗಳಿಗೆ ಒದಗಿ ಬರುತ್ತದೆ. ಹೀಗಾಗಿ ಈಚೆಗೆ ಗಣಪತಿ ವಿಗ್ರಹದ ಬೇಡಿಕೆಯೂ ಬರುತ್ತಿದೆ.…..ಮುಂದೆ ಓದಿ….

ಹಿಂದೆ ನಮ್ಮ ಪೂರ್ವಜರು ಸಗಣಿಯ ಉಂಡೆಯನ್ನು ಇಟ್ಟು ಅದರ ಮೇಲೆ ಗರಿಕೆಯನ್ನು ಇಟ್ಟು ಗಣಪ ಎಂದು ಪೂಜಿಸುತ್ತ ಇದ್ದರು. ಓಡಾಡುವ ಜಾಗದಲ್ಲೂ ಕೂಡ ಈ ರೀತಿ ಇಡುತ್ತಲಿದ್ದರು. ಈ ರೀತಿ ಇಡುವುದರಿಂದ ನೆಗೆಟಿವ್ ಎನರ್ಜಿ ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ ಹಾಗೂ ರೇಡಿಯೇಶನ್ ಪ್ರಭಾವ ಕೂಡ ಬೀರುವುದಿಲ್ಲ ಎನ್ನುವುದು ಅನೇಕರ ನಂಬಿಕೆಯೂ ಹೌದು.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ನಿವೃತ್ತ ಶಿಕ್ಷಕ ಎಸ್. ಬಿ. ಹಂಡಗಲ್, ರಾಸಾಯನಿಕ ಹಾಗೂ ವಿಷಕಾರಿ ಬಣ್ಣಗಳನ್ನು ಬಳಸಿ ತಯಾರಿಸಿದ ಮೂರ್ತಿಗಳಿಂದ ಪರಿಸರಕ್ಕೆ ಹಾನಿಯಾಗುತ್ತಿತ್ತು, ಆದರೆ ರೈತ ಮುತ್ತು ಕನ್ನೂರು ತಯಾರಿಸಿದ ಗೋಮಯ ಗಣಪ ಸಂಪೂರ್ಣ ಪರಿಸರ ಪೂರಕ ಎಂದು ಹೇಳಿದರು.

Environmental enthusiasts, along with government officials, are advocating for the use of chemical-free materials in the preparation and celebration of the Ganesha festival. In a commendable effort, Muthu Kannur, a farmer from Bidarakundi village in Muddebihala taluk of Vijayapur district, has gained recognition for creating a Gomaya Ganesha idol using cow dung.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

3 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

4 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

12 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

17 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

17 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago