Advertisement
MIRROR FOCUS

ಗೋವಿನ ಸಗಣಿಯಿಂದ ಗಣೇಶ ಮೂರ್ತಿ | ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗೆ ಆದ್ಯತೆ ನೀಡಿದ ರೈತ|

Share

ಎಲ್ಲೆಡೆ ಗಣೇಶ ಹಬ್ಬ ಜೋರಾಗಿಯೇ ನಡೆಯುತ್ತದೆ. ಸರ್ಕಾರವೂ ಸೇರಿದಂತೆ ಪರಿಸರ ಪ್ರೇಮಿಗಳು ರಾಸಾಯನಿಕ ರಹಿತವಾದ ವಿಗ್ರಹ ತಯಾರಿ ಹಾಗೂ ಗಣೇಶ ಹಬ್ಬವನ್ನು ಆಚರಿಸಿ ಎಂದು ಮನವಿ ಮಾಡುತ್ತಾರೆ. ಈ ನಡುವೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ರೈತ ಮುತ್ತು ಕನ್ನೂರು, ಗೋವಿನ ಸಗಣಿಯಿಂದ ಗೋಮಯ ಗಣೇಶ ಮೂರ್ತಿ ತಯಾರಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.…..ಮುಂದೆ ಓದಿ….

ಪ್ರತಿ ವರ್ಷವೂ ಪರಿಸರ ಸ್ನೇಹಿ ಗೋವಿನ ಸಗಣಿಯಿಂದ ಗಣೇಶನ ಮೂರ್ತಿ ತಯಾರಿಸುತ್ತಿದ್ದು, ರಾಜ್ಯ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲೂ ಈ ಮೂರ್ತಿಗಳಿಗೆ ಹೆಚ್ಚಿನ ಬೇಡಿಕೆಯಿದೆ.ಗೋಮಯ ಗಣೇಶ ಮೂರ್ತಿಯಿಂದ ಪರಿಸರಕ್ಕೆ ಯಾವುದೇ ಹಾನಿಯಿಲ್ಲ. ಈ ಮೂರ್ತಿಯನ್ನು ಒಂದು ಬಕೆಟ್ ನಲ್ಲಿ ವಿಸರ್ಜಿಸಿದರೆ ಆದು ಸಂಪೂರ್ಣ ಕರಗಿ ಗೊಬ್ಬರದ ರೂಪದಲ್ಲಿ ಮತ್ತೆ ಗಿಡ – ಸಸಿಗಳಿಗೆ ಒದಗಿ ಬರುತ್ತದೆ. ಹೀಗಾಗಿ ಈಚೆಗೆ ಗಣಪತಿ ವಿಗ್ರಹದ ಬೇಡಿಕೆಯೂ ಬರುತ್ತಿದೆ.…..ಮುಂದೆ ಓದಿ….

ಹಿಂದೆ ನಮ್ಮ ಪೂರ್ವಜರು ಸಗಣಿಯ ಉಂಡೆಯನ್ನು ಇಟ್ಟು ಅದರ ಮೇಲೆ ಗರಿಕೆಯನ್ನು ಇಟ್ಟು ಗಣಪ ಎಂದು ಪೂಜಿಸುತ್ತ ಇದ್ದರು. ಓಡಾಡುವ ಜಾಗದಲ್ಲೂ ಕೂಡ ಈ ರೀತಿ ಇಡುತ್ತಲಿದ್ದರು. ಈ ರೀತಿ ಇಡುವುದರಿಂದ ನೆಗೆಟಿವ್ ಎನರ್ಜಿ ಮನೆಯೊಳಗೆ ಪ್ರವೇಶಿಸದಂತೆ ತಡೆಯುತ್ತದೆ ಹಾಗೂ ರೇಡಿಯೇಶನ್ ಪ್ರಭಾವ ಕೂಡ ಬೀರುವುದಿಲ್ಲ ಎನ್ನುವುದು ಅನೇಕರ ನಂಬಿಕೆಯೂ ಹೌದು.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ ನಿವೃತ್ತ ಶಿಕ್ಷಕ ಎಸ್. ಬಿ. ಹಂಡಗಲ್, ರಾಸಾಯನಿಕ ಹಾಗೂ ವಿಷಕಾರಿ ಬಣ್ಣಗಳನ್ನು ಬಳಸಿ ತಯಾರಿಸಿದ ಮೂರ್ತಿಗಳಿಂದ ಪರಿಸರಕ್ಕೆ ಹಾನಿಯಾಗುತ್ತಿತ್ತು, ಆದರೆ ರೈತ ಮುತ್ತು ಕನ್ನೂರು ತಯಾರಿಸಿದ ಗೋಮಯ ಗಣಪ ಸಂಪೂರ್ಣ ಪರಿಸರ ಪೂರಕ ಎಂದು ಹೇಳಿದರು.

Environmental enthusiasts, along with government officials, are advocating for the use of chemical-free materials in the preparation and celebration of the Ganesha festival. In a commendable effort, Muthu Kannur, a farmer from Bidarakundi village in Muddebihala taluk of Vijayapur district, has gained recognition for creating a Gomaya Ganesha idol using cow dung.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

14 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

15 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

19 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

19 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

19 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago