ರಷ್ಯಾ-ಉಕ್ರೇನ್‌ ಯುದ್ಧ | ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ 628 ಭಾರತೀಯರ ರಕ್ಷಣೆ |

March 3, 2022
11:02 AM

ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್​ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.

ಹಂಗೇರಿಯಾದ ಬುಡಾಪೆಸ್ಟ್​ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್​ ಭಟ್​ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್​ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್​ಬೇಸ್​ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror