ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.
ಹಂಗೇರಿಯಾದ ಬುಡಾಪೆಸ್ಟ್ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್ಬೇಸ್ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…