Advertisement
ಸುದ್ದಿಗಳು

ತುಂಬೆಯಲ್ಲಿ ನೇತ್ರಾವತಿ ನದಿಗೆ ಗಂಗಾಪೂಜೆ | ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹ |

Share

ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ  ಮಂಗಳೂರು ನಗರವಾಸಿಗಳಿಗೆ, ಕೃಷಿಗೆ ಹಾಗೂ ಇನ್ನಿತರ ಪ್ರದೇಶಗಳಿಗೆ  ನೀರು ಸರಬರಾಜು ಆಗುತ್ತಿದೆ. ನೀರಿನ ಒಳಹರಿವು ಚೆನ್ನಾಗಿದ್ದು,  ಈ ವರ್ಷದಲ್ಲಿಯೂ ಕೂಡ  ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ  ನೀರು ಸಂಗ್ರಹವಾಗಿರುವುದರಿಂದ  ಮುಂದಿನ ದಿನಗಳಲ್ಲಿ  ನೀರಿನ ಕೊರತೆಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಲಸಿರಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳು ಪೂರ್ಣಗೊಂಡರೆ ಶೀಘ್ರದಲ್ಲಿ  ಮಂಗಳೂರು ಜನತೆಗೆ  ದಿನದ 24 ಗಂಟೆ  ನೀರು ಸರಬರಾಜು ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ನೀರು ಸೀಮಿತವಾಗಿ ಸಿಗುವ ಸಂಪನ್ಮೂಲವಾಗಿದೆ.  ಮುಂದಿನ ಬರುವಂತಹ ಬೇಸಿಗೆ ಕಾಲದಲ್ಲಿ ಹಾಗೂ ನಂತರವೂ ಕೂಡ   ಮಹಾನಗರಪಾಲಿಕೆ ಸುವ್ಯವಸ್ಥಿತವಾಗಿ  ನಗರದ ಜನತೆಗೆ ಸಕಾಲದಲ್ಲಿ ನೀರು ಪೂರೈಸಲು ಇಂದು ನೇತ್ರಾವತಿ ನದಿಗೆ ಗಂಗಾಪೂಜೆ ಮಾಡಲಾಯಿತು ಹಾಗೂ ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಿರಲಿ ಎಂದರು.

ಉಪಮೇಯರ್ ಭಾನುಮತಿ, ವಿಪಕ್ಷ ನಾಯಕ  ಅನಿಲ್ ಕುಮಾರ್, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ತೆರಿಗೆ ಮತ್ತು ಹಣಕಾಸು ತಾಯಿ ಸಮಿತಿ ಅಧ್ಯಕ್ಷ  ಕದ್ರಿ ಮನೋಹರ್ ಶೆಟ್ಟಿ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ  ಸುಮಿತ್ರ, ಪಟ್ಟಣ ಯೋಜನೆ ಮತ್ತು ಸುಧಾರಣಾ ಸಮಿತಿ ಅಧ್ಯಕ್ಷೆ ವೀಣಾ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ  ಸರಿತಾ, ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ,  ಜಯಾನಂದ ಅಂಚನ್, ಭಾಸ್ಕರ್ ಕೆ  ಮತ್ತಿತರರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago