ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ ಪೂಜೆ ನಡೆಯಿತು. ಗಂಗಾ ಪೂಜೆ ನೆರವೇರಿಸಿದ ಮೇಯರ್ ಮನೋಜ್ ಕುಮಾರ್ ಮಾತನಾಡಿ, ನೇತ್ರಾವತಿ ನದಿಯಿಂದ ಮಂಗಳೂರು ನಗರವಾಸಿಗಳಿಗೆ, ಕೃಷಿಗೆ ಹಾಗೂ ಇನ್ನಿತರ ಪ್ರದೇಶಗಳಿಗೆ ನೀರು ಸರಬರಾಜು ಆಗುತ್ತಿದೆ. ನೀರಿನ ಒಳಹರಿವು ಚೆನ್ನಾಗಿದ್ದು, ಈ ವರ್ಷದಲ್ಲಿಯೂ ಕೂಡ ಅಣೆಕಟ್ಟಿನಲ್ಲಿ 6 ಮೀ ಆಳದವರೆಗೆ ನೀರು ಸಂಗ್ರಹವಾಗಿರುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಕೊರತೆಯಾಗುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಲಸಿರಿ ಕಾಮಗಾರಿಗಳು ನಡೆಯುತ್ತಿದ್ದು, ಕಾಮಗಾರಿಗಳು ಪೂರ್ಣಗೊಂಡರೆ ಶೀಘ್ರದಲ್ಲಿ ಮಂಗಳೂರು ಜನತೆಗೆ ದಿನದ 24 ಗಂಟೆ ನೀರು ಸರಬರಾಜು ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಮಾತನಾಡಿ, ನೀರು ಸೀಮಿತವಾಗಿ ಸಿಗುವ ಸಂಪನ್ಮೂಲವಾಗಿದೆ. ಮುಂದಿನ ಬರುವಂತಹ ಬೇಸಿಗೆ ಕಾಲದಲ್ಲಿ ಹಾಗೂ ನಂತರವೂ ಕೂಡ ಮಹಾನಗರಪಾಲಿಕೆ ಸುವ್ಯವಸ್ಥಿತವಾಗಿ ನಗರದ ಜನತೆಗೆ ಸಕಾಲದಲ್ಲಿ ನೀರು ಪೂರೈಸಲು ಇಂದು ನೇತ್ರಾವತಿ ನದಿಗೆ ಗಂಗಾಪೂಜೆ ಮಾಡಲಾಯಿತು ಹಾಗೂ ಮುಂದಿನ ದಿನಗಳಲ್ಲಿ ನೀರಿನ ಅಭಾವ ಉಂಟಾಗದಿರಲಿ ಎಂದರು.
ಉಪಮೇಯರ್ ಭಾನುಮತಿ, ವಿಪಕ್ಷ ನಾಯಕ ಅನಿಲ್ ಕುಮಾರ್, ಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ತೆರಿಗೆ ಮತ್ತು ಹಣಕಾಸು ತಾಯಿ ಸಮಿತಿ ಅಧ್ಯಕ್ಷ ಕದ್ರಿ ಮನೋಹರ್ ಶೆಟ್ಟಿ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಸುಮಿತ್ರ, ಪಟ್ಟಣ ಯೋಜನೆ ಮತ್ತು ಸುಧಾರಣಾ ಸಮಿತಿ ಅಧ್ಯಕ್ಷೆ ವೀಣಾ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ ಸರಿತಾ, ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಜಯಾನಂದ ಅಂಚನ್, ಭಾಸ್ಕರ್ ಕೆ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…