ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಿದೆ.
ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…