ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಿದೆ.
ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.