ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡಿದೆ.
ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.
ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…