ಸಾಹಿತ್ಯ

ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವಿಚಾರ ಗೋಷ್ಠಿ | ಚಪ್ಪಲಿ ಇಡುವುದರಿಂದ ಚಪ್ಪಾಳೆ ತಟ್ಟುವವರೆಗೂ ಮಹಿಳೆಯರು “ಸೈ” |

Share

ಅಮ್ಮನಿಗೆ ಬಾಲ್ಯದಿಂದಲೇ ಓದುವ, ಬರೆಯುವ ಹವ್ಯಾಸವಿತ್ತು. ಸಭೆ-ಸಮಾರಂಭಗಳಿಗೆ ಹೋದಾಗ, ಪ್ರವಾಸಕ್ಕೆ ಹೋದಾಗ ಅವರು ನೋಡಿದ, ಕೇಳಿದ ವಿಚಾರಗಳನ್ನು ಕಲೆ ಹಾಕಿ ಸಾಕಷ್ಟು ಚಿಂತನ-ಮಥನ ಮಾಡುತ್ತಿದ್ದರು. ಧರ್ಮಸ್ಥಳದಲ್ಲಿ ಅವರ ಸೃಜನಶೀಲ ಚಿಂತನೆ ಹಾಗೂ ಕ್ರಿಯಾಶೀಲತೆಗೆ ಬೇಕಾದಷ್ಟು ವೇದಿಕೆ ಹಾಗೂ ಅವಕಾಶಗಳು ದೊರಕಿವೆ ಎಂದು ಶ್ರದ್ಧಾಅಮಿತ್ ಹೇಳಿದರು.

Advertisement

ಅವರು ಧರ್ಮಸ್ಥಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮಾಭಿವೃದ್ಧಿಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಗೋಷ್ಠಿಯನ್ನು ಉದ್ಘಾಟಿಸಿ  ಮಾತನಾಡಿದರು. ಧರ್ಮಸ್ಥಳದ ಸಿಬ್ಬಂದಿಗೆ ಅವರು ನಾಟಕ, ಯಕ್ಷಗಾನ, ಪುರಾಣವಾಚನ ಇತ್ಯಾದಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಪರಿಕಲ್ಪನೆಯಲ್ಲಿ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿರುವುದರಿಂದ ಅನೇಕ ಉದಯೋನ್ಮುಖ ಕಲಾವಿದರು ಮೂಡಿ ಬಂದಿದ್ದಾರೆ ಎಂದರು. “ಗೆಳತಿ” ಮತ್ತು “ಮಗಳಿಗೊಂದು ಪತ್ರ” ಕೃತಿಗಳಲ್ಲಿ ಅವರ ಲೇಖನಗಳ ಸಂಗ್ರಹವಿದ್ದು ಸಾರ್ಥಕ ಬದುಕಿಗೆ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆಎಂದು ಹೇಳಿದರು.

ಶಿವಮೊಗ್ಗದ ಸಹ್ಯಾದ್ರಿಕಾಲೇಜಿನಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಶುಭದಾಸ್ ಮರವಂತೆ ಮಾತನಾಡಿ, ಹೇಮಾವತಿ ಹೆಗ್ಗಡೆಯವರ ಲೇಖನಗಳಲ್ಲಿ ಉತ್ಕೃಷ್ಟ ವಿಚಾರಗಳ ಧೀಮಂತಿಕೆ ಮತ್ತು ಶ್ರೀಮಂತಿಕೆ ಇದ್ದುಓದುಗರಲ್ಲಿಅರಿವಿನ ಬೆಳಕಿನೊಂದಿಗೆ ಆತ್ಮವಿಶ್ವಾಸ ಮತ್ತು ನವಚೈತನ್ಯವನ್ನು ಮೂಡಿಸುತ್ತವೆ ಎಂದು ಹೇಳಿದರು. ಹೆಗ್ಗಡೆಯವರ ಮಾತೃಶ್ರೀ ರತ್ನಮ್ಮನವರು, ಹೇಮಾವತಿ ಹೆಗ್ಗಡೆಯವರು ಹಾಗೂ ಮಗಳು, ಶ್ರದ್ಧಾಅಮಿತ್‍ ಅವರ ಸಾಹಿತ್ಯ, ಸೇವೆ, ಸಾಧನೆ ಬಗ್ಗೆ ಅವರು ಅಭಿನಂದಿಸಿದರು.

ಬೆಂಗಳೂರಿನ ಭಾರತೀಯ ಜೀವವಿಮಾ ನಿಗಮದ ಹಿರಿಯ ಅಧಿಕಾರಿ ರಾಜ್ಯಶ್ರೀ ಹಂಪನಾ ಮಾತನಾಡಿ, ಹೇಮಾವತಿ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿದೆ. ಸ್ವಚ್ಛತೆ, ಕುಟುಂಬ ನಿರ್ವಹಣೆ, ಮಕ್ಕಳ ಪಾಲನೆ-ಪೋಷಣೆ, ಉಳಿತಾಯ, ಸಭೆ-ಸಮಾರಂಭ ಆಯೋಜನೆ ಮೊದಲಾದ ಚಟುವಟಿಕೆಗಳಲ್ಲಿ ಮಹಿಳೆಯರು ಉನ್ನತ ಸಾಧನೆ ಮಾಡಿ ಎಲ್ಲಾ ರಂಗಗಳಲ್ಲಿಯೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಚಪ್ಪಲಿ ಇಡುವುದರಿಂದ ಚಪ್ಪಾಳೆ ತಟ್ಟುವ ವರೆಗೂ ಮಹಿಳೆಯರು “ಸೈ” ಎನಿಸಿಕೊಂಡಿದ್ದಾರೆ ಎಂದು ಹೇಳಿ ಅಭಿನಂದಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಸಂಗೀತಾ ಸ್ವಾಗತಿಸಿದರು. ಯೋಜನಾಧಿಕಾರಿ ಚೇತನಾ ವಂದಿಸಿದರು. ಮಮತಾ ಹರೀಶ್‍ರಾವ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

2 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

9 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

10 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

12 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago