Advertisement
ಸಾಹಿತ್ಯ

ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ವಿಚಾರ ಗೋಷ್ಠಿ | ಚಪ್ಪಲಿ ಇಡುವುದರಿಂದ ಚಪ್ಪಾಳೆ ತಟ್ಟುವವರೆಗೂ ಮಹಿಳೆಯರು “ಸೈ” |

Share

ಅಮ್ಮನಿಗೆ ಬಾಲ್ಯದಿಂದಲೇ ಓದುವ, ಬರೆಯುವ ಹವ್ಯಾಸವಿತ್ತು. ಸಭೆ-ಸಮಾರಂಭಗಳಿಗೆ ಹೋದಾಗ, ಪ್ರವಾಸಕ್ಕೆ ಹೋದಾಗ ಅವರು ನೋಡಿದ, ಕೇಳಿದ ವಿಚಾರಗಳನ್ನು ಕಲೆ ಹಾಕಿ ಸಾಕಷ್ಟು ಚಿಂತನ-ಮಥನ ಮಾಡುತ್ತಿದ್ದರು. ಧರ್ಮಸ್ಥಳದಲ್ಲಿ ಅವರ ಸೃಜನಶೀಲ ಚಿಂತನೆ ಹಾಗೂ ಕ್ರಿಯಾಶೀಲತೆಗೆ ಬೇಕಾದಷ್ಟು ವೇದಿಕೆ ಹಾಗೂ ಅವಕಾಶಗಳು ದೊರಕಿವೆ ಎಂದು ಶ್ರದ್ಧಾಅಮಿತ್ ಹೇಳಿದರು.

ಅವರು ಧರ್ಮಸ್ಥಳದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಗ್ರಾಮಾಭಿವೃದ್ಧಿಯೋಜನೆಯ ಆಶ್ರಯದಲ್ಲಿ ಆಯೋಜಿಸಿದ ವಿಚಾರ ಗೋಷ್ಠಿಯನ್ನು ಉದ್ಘಾಟಿಸಿ  ಮಾತನಾಡಿದರು. ಧರ್ಮಸ್ಥಳದ ಸಿಬ್ಬಂದಿಗೆ ಅವರು ನಾಟಕ, ಯಕ್ಷಗಾನ, ಪುರಾಣವಾಚನ ಇತ್ಯಾದಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಹೊಸ ಪರಿಕಲ್ಪನೆಯಲ್ಲಿ ಮಾರ್ಗದರ್ಶನ ಮತ್ತು ಪ್ರೋತ್ಸಾಹ ನೀಡುತ್ತಿರುವುದರಿಂದ ಅನೇಕ ಉದಯೋನ್ಮುಖ ಕಲಾವಿದರು ಮೂಡಿ ಬಂದಿದ್ದಾರೆ ಎಂದರು. “ಗೆಳತಿ” ಮತ್ತು “ಮಗಳಿಗೊಂದು ಪತ್ರ” ಕೃತಿಗಳಲ್ಲಿ ಅವರ ಲೇಖನಗಳ ಸಂಗ್ರಹವಿದ್ದು ಸಾರ್ಥಕ ಬದುಕಿಗೆ ಮಾಹಿತಿ, ಮಾರ್ಗದರ್ಶನದ ಕಣಜವಾಗಿದೆಎಂದು ಹೇಳಿದರು.

ಶಿವಮೊಗ್ಗದ ಸಹ್ಯಾದ್ರಿಕಾಲೇಜಿನಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಶುಭದಾಸ್ ಮರವಂತೆ ಮಾತನಾಡಿ, ಹೇಮಾವತಿ ಹೆಗ್ಗಡೆಯವರ ಲೇಖನಗಳಲ್ಲಿ ಉತ್ಕೃಷ್ಟ ವಿಚಾರಗಳ ಧೀಮಂತಿಕೆ ಮತ್ತು ಶ್ರೀಮಂತಿಕೆ ಇದ್ದುಓದುಗರಲ್ಲಿಅರಿವಿನ ಬೆಳಕಿನೊಂದಿಗೆ ಆತ್ಮವಿಶ್ವಾಸ ಮತ್ತು ನವಚೈತನ್ಯವನ್ನು ಮೂಡಿಸುತ್ತವೆ ಎಂದು ಹೇಳಿದರು. ಹೆಗ್ಗಡೆಯವರ ಮಾತೃಶ್ರೀ ರತ್ನಮ್ಮನವರು, ಹೇಮಾವತಿ ಹೆಗ್ಗಡೆಯವರು ಹಾಗೂ ಮಗಳು, ಶ್ರದ್ಧಾಅಮಿತ್‍ ಅವರ ಸಾಹಿತ್ಯ, ಸೇವೆ, ಸಾಧನೆ ಬಗ್ಗೆ ಅವರು ಅಭಿನಂದಿಸಿದರು.

ಬೆಂಗಳೂರಿನ ಭಾರತೀಯ ಜೀವವಿಮಾ ನಿಗಮದ ಹಿರಿಯ ಅಧಿಕಾರಿ ರಾಜ್ಯಶ್ರೀ ಹಂಪನಾ ಮಾತನಾಡಿ, ಹೇಮಾವತಿ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ಮಹಿಳೆಯರ ಬದುಕಿನಲ್ಲಿ ಕ್ರಾಂತಿಕಾರಿ ಪರಿವರ್ತನೆಯಾಗಿದೆ. ಸ್ವಚ್ಛತೆ, ಕುಟುಂಬ ನಿರ್ವಹಣೆ, ಮಕ್ಕಳ ಪಾಲನೆ-ಪೋಷಣೆ, ಉಳಿತಾಯ, ಸಭೆ-ಸಮಾರಂಭ ಆಯೋಜನೆ ಮೊದಲಾದ ಚಟುವಟಿಕೆಗಳಲ್ಲಿ ಮಹಿಳೆಯರು ಉನ್ನತ ಸಾಧನೆ ಮಾಡಿ ಎಲ್ಲಾ ರಂಗಗಳಲ್ಲಿಯೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.ಚಪ್ಪಲಿ ಇಡುವುದರಿಂದ ಚಪ್ಪಾಳೆ ತಟ್ಟುವ ವರೆಗೂ ಮಹಿಳೆಯರು “ಸೈ” ಎನಿಸಿಕೊಂಡಿದ್ದಾರೆ ಎಂದು ಹೇಳಿ ಅಭಿನಂದಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕಿ ಸಂಗೀತಾ ಸ್ವಾಗತಿಸಿದರು. ಯೋಜನಾಧಿಕಾರಿ ಚೇತನಾ ವಂದಿಸಿದರು. ಮಮತಾ ಹರೀಶ್‍ರಾವ್‍ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

5 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

6 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

14 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

16 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

22 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

22 hours ago