Advertisement
Opinion

ಪ್ಲಾಸ್ಟಿಕ್ ತ್ಯಜಿಸಿ ಮನುಕುಲ ಉಳಿಸಿ… | ಮನೆಯ ಬಾಗಿಲಲ್ಲೇ ಬಟ್ಟೆ ಚೀಲ ನೇತು ಹಾಕೋಣ.. |

Share

ತಿಂಗಳೊಂದರ ಹಿಂದೆ ತೋಟಕ್ಕೆ ಔಷಧಿ ಬಿಡುವ ಕಾರ್ಯದಲ್ಲಿ ಮಗ್ನನಾಗಿದ್ದೆ. ಮಧ್ಯಾಹ್ನದ ಹೊತ್ತು ಧ್ವನಿವರ್ಧಕದ ಸ್ವರ ಮನೆಯ ಬಳಿಯಿಂದ ಕೇಳಿಸಿತು. ಯಾವುದೋ ದರ ಕಡಿತದ ಮಾರಾಟದ ಪ್ರಚಾರದ್ದು ಇರಬಹುದು ಅಂತ ಊಹಿಸಿಕೊಂಡು ಮನೆಯ ಬಳಿ ಬಂದೆ. ಆಶ್ಚರ್ಯ ಕಾದಿತ್ತು. ಗ್ರಾಮ ಪಂಚಾಯತಿಯ(Grama panchayat) ಕಸ ಸಂಗ್ರಹಣಾ ವಾಹನ ಮನೆಯಂಗಳದಲ್ಲಿ ನಿಂತಿತ್ತು. ಘನ ತ್ಯಾಜ್ಯದ ಸಂಗ್ರಹಣೆ ಮತ್ತು ವೈಜ್ಞಾನಿಕ ವಿಲೇವಾರಿಯ(Waste management) ಕುರಿತು ಸರಕಾರದ ಜವಾಬ್ದಾರಿಯನ್ನು ತಿಳಿಸಿ ಪ್ರತಿ ವಾರದ ಸಂಗ್ರಹಣೆಗೋಸ್ಕರ ಗೋಣಿಯೊಂದನ್ನು ಕೊಟ್ಟು ತೆರಳಿದರು. ಬಹಳ ಒಳ್ಳೆಯ ವ್ಯವಸ್ಥೆ ಎಂದು ಅವರ ಬೆನ್ನು ತಟ್ಟಿ ಕಳಿಸಿದ್ದೆ.…..ಮುಂದೆ ಓದಿ….

ಮನೆಯೊಂದಕ್ಕೆ ತಿಂಗಳೊಂದರ ಕೇವಲ ಐವತ್ತು ರೂಪಾಯಿಯ ದರವನ್ನು ವಿಧಿಸಿದ್ದಾರೆ. ಪ್ರತಿಯೊಂದು ಮನೆಯವರು ಕಸವನ್ನು ನೀಡುವುದು ಕಡ್ಡಾಯ ಮತ್ತು ಜವಾಬ್ದಾರಿ ಎಂಬ ಕುರಿತು ಕಾಗದವನ್ನು ಹಂಚಿದ್ದಾರೆ. ವೈಜ್ಞಾನಿಕ ವಿಲೇವಾರಿ ಮಾಡದೆ ಇದ್ದರೆ ಆಗುವ ಕಾನೂನಾತ್ಮಕ ದಂಡದ ಬಗ್ಗೆ ಎಚ್ಚರಿಸಿದ್ದಾರೆ. ಸ್ವಚ್ಛ ಭಾರತದ ಕಲ್ಪನೆಗೆ ಬಹಳ ಉತ್ತಮ ವ್ಯವಸ್ಥೆ ಅಂತೂ ಹೌದು.

ಸಾರ್ವಜನಿಕರಾದ ನಾವು ಈ ವ್ಯವಸ್ಥೆಯಲ್ಲಿ ಅತ್ಯಂತ ಜವಾಬ್ದಾರಿಯಿಂದ ಯಾಕೆ ಸೇರಿಕೊಳ್ಳಬೇಕು ಎಂಬುದನ್ನು ಯೋಚಿಸೋಣ. ಕಾನೂನಾತ್ಮಕ ದಂಡನೆಗೆ ಬೆದರಿ ವ್ಯವಸ್ಥೆಗೆ ಸೇರಿಕೊಳ್ಳುವುದಲ್ಲ. ಸೂಕ್ಷ್ಮಗ್ರಾಹಿಗಳಾದವರು ಕಾನೂನಿನ ದಂಡನೆಯಿಂದ ತಪ್ಪಿಸಿಕೊಳ್ಳಬಹುದು ಆದರೆ ಪ್ರಕೃತಿ ಅಥವಾ ದೇವರು ಕೊಡುವ ದಂಡನೆಯಿಂದ ಯಾರೂ ತಪ್ಪಿಸಿಕೊಳ್ಳಲಾರರು ಎಂಬ ಅರಿವು ನಮಗೆಲ್ಲರಿಗೂ ಬರಬೇಕಾಗಿದೆ. ನಾವು ಪ್ರತಿದಿನವೋ,ಪ್ರತಿವಾರವೋ ಪೇಟೆಯಿಂದ ಬರುವಾಗ ಸಾಮಾನುಗಳನ್ನು ತಂದ ಪ್ಲಾಸ್ಟಿಕ್ ಚೀಲಗಳು, ಹರಿದು ತಿಂದ ತಿಂಡಿಗಳ ತೊಟ್ಟೆಗಳು, ಜಗಿದು ಬಿಸಾಡುವ ಗುಟ್ಕಾ ಪ್ಯಾಕೆಟ್ಟುಗಳು, ಅಲ್ಲಲ್ಲಿ ಆಗಾಗ ನಡೆಯುವ ಪೂಜೆ ಪುನಸ್ಕಾರಾದಿ ಕಾರ್ಯಕ್ರಮಗಳಲ್ಲಿ ಬಳಸಿ ಎಸೆಯುವ ಪ್ಲಾಸ್ಟಿಕ್ ಲೋಟಗಳು ಮತ್ತು ಇನ್ನಿತರ ಬಳಸಿ ಬಿಸಾಡುವ ಯಾವುದೇ ಪ್ಲಾಸ್ಟಿಕ್ ಸಾಮಾನುಗಳು ಅಲ್ಲಲ್ಲಿ ನೆಲೆ ನಿಂತು ಅಂತರ್ಜಲವನ್ನು ವಿಷಪೂರಿತವಾಗಿಸುತ್ತದೆ ಎಂಬುದು ನೆನಪಿರಲಿ. ಹರಿದು ಸಮುದ್ರ ಸೇರಿದರೆ ಸಮುದ್ರದ ಉಪ್ಪಿನಲ್ಲಿಯೂ ಪ್ಲಾಸ್ಟಿಕ್ ವಿಷ ಸೇರಿರುತ್ತದೆ ಎಂಬುದು ನೆನಪಿರಲಿ. ಬಿಸಿಯಾದ ಕಾಫಿ ಚಾ ಊಟ ಏನೇ ಇರಲಿ ಪ್ಲಾಸ್ಟಿಕ್ ನಲ್ಲಿ ಬಳಸಿದರೆ ನಮ್ಮ ಶರೀರವನ್ನೇ ಅಣು ರೂಪದಲ್ಲಿ ಹೊಕ್ಕುತ್ತದೆ ಎಂಬುದು ನೆನಪಿರಲಿ. ಈ ಎಲ್ಲಾ ಕಾರಣದಿಂದ ದೇವರು ಕೊಡುವ ಶಿಕ್ಷೆ ಊಹೆಗೂ ನಿಲುಕದ್ದು ಎಂಬುದು ನೆನಪಿರಲಿ.

ಗಂಡಸರಲ್ಲಿ ಬರುವ ಸಂತಾನ ಹೀನತೆ ಮತ್ತು ಹೆಂಗಸರ ಬಂಜೆತನಕ್ಕೆ ಅತ್ಯಂತ ಮೂಲ ಕಾರಣ ಪ್ಲಾಸ್ಟಿಕ್. ಅನೇಕ ಚರ್ಮ ಕಾಯಿಲೆಗಳಿಗೆ ಮೂಲ ಕಾರಣ ಪ್ಲಾಸ್ಟಿಕ್. ಅನೇಕ ಅಲರ್ಜಿಗಳಿಗೂ ಇದು ಕಾರಣವಾಗುತ್ತದೆ. ಪ್ಲಾಸ್ಟಿಕ್ ಹೊತ್ತಿಸಿದರೆ ಬಿಡುಗಡೆಯಾಗುವ ಹೊಗೆಯಂತೂ ನಮ್ಮ ಶ್ವಾಸಕೋಶವನ್ನೇ ಹಾಳು ಕೆಡವಬಹುದು. ಈಗಾಗಲೇ ಹಬ್ಬುತ್ತಿರುವ ಕ್ಯಾನ್ಸರ್ ಮಹಾಮಾರಿ ಮನೆಮನೆಯನ್ನು ತಟ್ಟದಂತೆ ಮಾಡಬೇಕಾದರೆ ಪ್ಲಾಸ್ಟಿಕನ್ನು ಸಾಧ್ಯವಾದಷ್ಟು ತ್ಯಜಿಸಲೇಬೇಕು. ಅನಿವಾರ್ಯವಾಗಿ ಮನೆಗೆ ಬಂದ ಪ್ಲಾಸ್ಟಿಕ್ ಇದ್ದಲ್ಲಿ ಸರಕಾರದ ಈ ವ್ಯವಸ್ಥೆಗೆ ನಮ್ಮನ್ನು ನಾವು ತೊಡಗಿಸಿಕೊಳ್ಳಲೇಬೇಕು. ಈ ವ್ಯವಸ್ಥೆ ಇರುವುದು ಸರಕಾರಕ್ಕಾಗಿ ಅಲ್ಲ, ನಮಗಾಗಿ ಎಂಬುದು ನೆನಪಿರಲಿ.

ನಾವು ಆರೋಗ್ಯವಾಗಿ ಇರಬೇಕೆಂಬ ಆಸೆ ಇದ್ದಲ್ಲಿ,ನಮ್ಮ ಮಕ್ಕಳು ಅಥವಾ ಮೊಮ್ಮಕ್ಕಳ ಮುಖ ನೋಡಬೇಕೆಂಬ ಆಸೆ ಇದ್ದಲ್ಲಿ, ನಮ್ಮ ಕಣ್ಣೆದುರೇ ನಮ್ಮ ಪೀಳಿಗೆ ಕ್ಯಾನ್ಸರ್ ನಿಂದ ನರಳುವುದನ್ನು ನೋಡಬಾರದೆಂಬ ಆಸೆ ಇದ್ದಲ್ಲಿ, ಅವರ ಚಾಕರಿ ಮಾಡುವ ಸ್ಥಿತಿ ನಮಗೆ ಬಾರದೇ ಇರಲಿ ಎಂಬ ಆಸೆ ಇದ್ದಲ್ಲಿ, ನಮ್ಮ ಊರು, ನಮ್ಮ ಬೀದಿ,ನಮ್ಮ ತೋಡು ನದಿ ಸ್ವಚ್ಛ ಇರಬೇಕೆಂಬ ಆಸೆ ಇದ್ದಲ್ಲಿ ಪ್ಲಾಸ್ಟಿಕ್ ಅನ್ನು ಎಚ್ಚರದಿಂದ ಬಳಸೋಣ. ಬಳಸಿದ್ದನ್ನು ಎಚ್ಚರಿಕೆಯಿಂದ ವಿಲೇವಾರಿ ಮಾಡುವ ವ್ಯವಸ್ಥೆಯಲ್ಲಿ ತೊಡಗಿಕೊಳ್ಳೋಣ. ಪಂಚಾಯತ್ ವಿಧಿಸುವ 50ಯಾ ಇನ್ನೊಂದಷ್ಟು ಹೆಚ್ಚಿನ ರೂಪಾಯಿಗೆ ಆಸೆ ಪಡದೇ ಇರೋಣ. ಪ್ರಾಮಾಣಿಕ ಪ್ರಜೆಯಾಗೋಣ. ಮುಂದಿನ ಮಳೆಗಾಲದಲ್ಲಿ ಸ್ವಚ್ಛ ನೀರು ತೋಡಿನಲ್ಲಿ ಹರಿಯುವಂತೆ ಮಾಡೋಣ.

ಪ್ರತಿಯೊಬ್ಬರೂ ನೆನಪಿಡಬೇಕಾದದ್ದು ಮನೆಯ ಬಾಗಿಲಲ್ಲೇ ಚೀಲವೊಂದನ್ನು ನೇತು ಹಾಕೋಣ. ಪೇಟೆಗೆ ಹೋಗುವಾಗ ಅದನ್ನೇ ಕೊಂಡೊಯ್ಯೋಣ. ಬಾಗಿಲಲ್ಲಿದ್ದರೆ ನೆನಪಾಗಬಹುದು ಅಲ್ಲವಾದರೆ ಮರೆತು ಹೋಗಬಹುದು.

ಪ್ಲಾಸ್ಟಿಕ್ ತ್ಯಜಿಸಿ ಮನುಕುಲ ಉಳಿಸಿ

ಎ.ಪಿ. ಸದಾಶಿವ ಮರಿಕೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

10 hours ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

1 day ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

2 days ago

ಹವಾಮಾನ ವರದಿ| 10-05-2026 | ರಾಜ್ಯದಲ್ಲಿ ಮಳೆ ಕ್ಷೀಣಿಸುವ ಸೂಚನೆ | ಮೇ 15ರಿಂದ ಮುಂಗಾರು ಮಾರುತ ಚಟುವಟಿಕೆ ಚುರುಕು ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…

3 days ago

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

6 days ago