ಗರ್ಭ ಸಂಸ್ಕಾರ ಅಭಿಯಾನ | ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ | ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

June 11, 2023
11:35 AM

ಹಿಂದೂ ಸನಾತನ ಧರ್ಮ, ಅತ್ಯಂತ ಶ್ರೇಷ್ಠ ಧರ್ಮ. ಇದನ್ನು ಅರಿತವನ ಬಾಳು ಸದಾ ಗೌರವಯುತವಾಗಿ ಇರುತ್ತದೆ. ಹಾಗೆ ಯಾವುದೇ ಕಷ್ಟದಲ್ಲೂ ಜೀವನ ನಡೆಸಬಲ್ಲ ಧೈರ್ಯ, ಹುಮ್ಮಸ್ಸು ಬರುತ್ತದೆ. ಆದರೆ ಇತ್ತೀಚೆಗೆ ನಮ್ಮ ಹಿಂದೂ ಯುವ ಜನತೆ ಈ ಬಗ್ಗೆ ತಾತ್ಸಾರದಿಂದ ಕಾಣುತ್ತಿರುವುದು ಬೇಸರದ ಸಂಗತಿ. ಅದೆಷ್ಟೂ ಹಿಂದೂ ಸಂಘಟನೆಗಳು ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಪಟ್ಟರು ಅವರು ಪಾಶ್ಚಿಮಾತ್ಯ ಸಂಸ್ಕೃತಿಯತ್ತಲೇ ಸಾಗುತ್ತಿದ್ದಾರೆ. ಇದನ್ನರಿತ ನಮ್ಮ ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆ ಹೊಸ ಹೆಜ್ಜೆಯನ್ನಿಟ್ಟಿದೆ.

ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು
August 2, 2026
8:39 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror