Advertisement
ಸುದ್ದಿಗಳು

ಗರ್ಭ ಸಂಸ್ಕಾರ ಅಭಿಯಾನ | ಸುಸಂಸ್ಕೃತ, ದೇಶಭಕ್ತ ಶಿಶುಗಳ ಜನನಕ್ಕಾಗಿ ಗರ್ಭ ಸಂಸ್ಕಾರ | ಗರ್ಭಿಣಿಯರಿಗೆ ಭಗವದ್ಗೀತೆ, ರಾಮಾಯಣ ಪಾಠ

Share

ಹಿಂದೂ ಸನಾತನ ಧರ್ಮ, ಅತ್ಯಂತ ಶ್ರೇಷ್ಠ ಧರ್ಮ. ಇದನ್ನು ಅರಿತವನ ಬಾಳು ಸದಾ ಗೌರವಯುತವಾಗಿ ಇರುತ್ತದೆ. ಹಾಗೆ ಯಾವುದೇ ಕಷ್ಟದಲ್ಲೂ ಜೀವನ ನಡೆಸಬಲ್ಲ ಧೈರ್ಯ, ಹುಮ್ಮಸ್ಸು ಬರುತ್ತದೆ. ಆದರೆ ಇತ್ತೀಚೆಗೆ ನಮ್ಮ ಹಿಂದೂ ಯುವ ಜನತೆ ಈ ಬಗ್ಗೆ ತಾತ್ಸಾರದಿಂದ ಕಾಣುತ್ತಿರುವುದು ಬೇಸರದ ಸಂಗತಿ. ಅದೆಷ್ಟೂ ಹಿಂದೂ ಸಂಘಟನೆಗಳು ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಪಟ್ಟರು ಅವರು ಪಾಶ್ಚಿಮಾತ್ಯ ಸಂಸ್ಕೃತಿಯತ್ತಲೇ ಸಾಗುತ್ತಿದ್ದಾರೆ. ಇದನ್ನರಿತ ನಮ್ಮ ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆ ಹೊಸ ಹೆಜ್ಜೆಯನ್ನಿಟ್ಟಿದೆ.

ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.

ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧ

ವನ್ಯಜೀವಿಗಳಿಗೆ ಸಂತಾನಹರಣ ಚಿಂತನೆಗೆ ವಿರೋಧಿಸಿ ಚಾಮರಾಜನಗರದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.…

10 minutes ago

ಬಾಳೆಬರೆ ಘಾಟಿಯಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಬಾಳೆಬರೆ ಘಾಟಿಯಲ್ಲಿ ಕಾಮಗಾರಿ ಹಿನ್ನೆಲೆ ವಾಹನ ಸಂಚಾರ ತಾತ್ಕಾಲಿಕ ನಿಷೇಧಿಸಲಾಗಿದೆ. ಪ್ರಯಾಣಿಕರು ಪರ್ಯಾಯ…

17 minutes ago

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

15 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

15 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

16 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

16 hours ago