ಹಿಂದೂ ಸನಾತನ ಧರ್ಮ, ಅತ್ಯಂತ ಶ್ರೇಷ್ಠ ಧರ್ಮ. ಇದನ್ನು ಅರಿತವನ ಬಾಳು ಸದಾ ಗೌರವಯುತವಾಗಿ ಇರುತ್ತದೆ. ಹಾಗೆ ಯಾವುದೇ ಕಷ್ಟದಲ್ಲೂ ಜೀವನ ನಡೆಸಬಲ್ಲ ಧೈರ್ಯ, ಹುಮ್ಮಸ್ಸು ಬರುತ್ತದೆ. ಆದರೆ ಇತ್ತೀಚೆಗೆ ನಮ್ಮ ಹಿಂದೂ ಯುವ ಜನತೆ ಈ ಬಗ್ಗೆ ತಾತ್ಸಾರದಿಂದ ಕಾಣುತ್ತಿರುವುದು ಬೇಸರದ ಸಂಗತಿ. ಅದೆಷ್ಟೂ ಹಿಂದೂ ಸಂಘಟನೆಗಳು ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಪಟ್ಟರು ಅವರು ಪಾಶ್ಚಿಮಾತ್ಯ ಸಂಸ್ಕೃತಿಯತ್ತಲೇ ಸಾಗುತ್ತಿದ್ದಾರೆ. ಇದನ್ನರಿತ ನಮ್ಮ ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆ ಹೊಸ ಹೆಜ್ಜೆಯನ್ನಿಟ್ಟಿದೆ.
ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.
ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…