ಹಿಂದೂ ಸನಾತನ ಧರ್ಮ, ಅತ್ಯಂತ ಶ್ರೇಷ್ಠ ಧರ್ಮ. ಇದನ್ನು ಅರಿತವನ ಬಾಳು ಸದಾ ಗೌರವಯುತವಾಗಿ ಇರುತ್ತದೆ. ಹಾಗೆ ಯಾವುದೇ ಕಷ್ಟದಲ್ಲೂ ಜೀವನ ನಡೆಸಬಲ್ಲ ಧೈರ್ಯ, ಹುಮ್ಮಸ್ಸು ಬರುತ್ತದೆ. ಆದರೆ ಇತ್ತೀಚೆಗೆ ನಮ್ಮ ಹಿಂದೂ ಯುವ ಜನತೆ ಈ ಬಗ್ಗೆ ತಾತ್ಸಾರದಿಂದ ಕಾಣುತ್ತಿರುವುದು ಬೇಸರದ ಸಂಗತಿ. ಅದೆಷ್ಟೂ ಹಿಂದೂ ಸಂಘಟನೆಗಳು ಈ ಬಗ್ಗೆ ಅರಿವು ಮೂಡಿಸಲು ಪ್ರಯತ್ನಪಟ್ಟರು ಅವರು ಪಾಶ್ಚಿಮಾತ್ಯ ಸಂಸ್ಕೃತಿಯತ್ತಲೇ ಸಾಗುತ್ತಿದ್ದಾರೆ. ಇದನ್ನರಿತ ನಮ್ಮ ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಸಂಯೋಜಿತ ಸಂಸ್ಥೆ ಹೊಸ ಹೆಜ್ಜೆಯನ್ನಿಟ್ಟಿದೆ.
ಇಂದಿನಿಂದ ಗರ್ಭ ಸಂಸ್ಕಾರ ಅಭಿಯಾನವನ್ನು ಪ್ರಾರಂಭಿಸಲು ಮುಂದಾಗಿದೆ. ಈ ಅಭಿಯಾನದ ಅಡಿಯಲ್ಲಿ ಗರ್ಭಿಣಿಯರಿಗೆ ರಾಮಾಯಣ, ಭಗವದ್ಗೀತೆ ಬೋಧಿಸಿ, ಗರ್ಭದಿಂದಲೇ ಶಿಶುಗಳಿಗೆ ಸಂಸ್ಕಾರವನ್ನು ಕಲಿಸುವ ಒಂದು ಪ್ರಯತ್ನ ಇದಾಗಿದೆ. ಭಗವದ್ಗೀತೆ ಮತ್ತು ರಾಮಾಯಣದಂತಹ ಧಾರ್ಮಿಕ ಗ್ರಂಥಗಳನ್ನು ಓದಲು, ಸಂಸ್ಕೃತ ಮಂತ್ರಗಳನ್ನು ಪಠಿಸಲು ಮತ್ತು ಯೋಗಾಭ್ಯಾಸ ಮಾಡಲು ಪ್ರೋತ್ಸಾಹಿಸಲಾಗುತ್ತದೆ, ಇದರಿಂದ ಸುಸಂಸ್ಕೃತ ಮತ್ತು ದೇಶಭಕ್ತ ಶಿಶುಗಳು ಹುಟ್ಟುತ್ತವೆ ಎಂದು ಹೇಳಿದೆ. ಗರ್ಭಾವಸ್ಥೆಯಿಂದ ಹೆರಿಗೆಯವರೆಗೆ ಶಿಶುಗಳು ಗರ್ಭದಲ್ಲಿ ಸಂಸ್ಕೃತಿ ಮತ್ತು ಮೌಲ್ಯಗಳನ್ನು ಕಲಿಯುವುದನ್ನು ಖಚಿತಪಡಿಸಿಕೊಳ್ಳಲು, ಎರಡು ವರ್ಷವನ್ನು ತಲುಪುವವರೆಗೆ ಈ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದು ಸಂವರ್ಧಿನಿ ನ್ಯಾಸ್ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.
ಯೋಗಾಭ್ಯಾಸವು ಸಹಜ ಹೆರಿಗೆಯಾಗಲು ಗರ್ಭಿಣಿಯರಿಗೆ ಸಹಾಯವಾಗುತ್ತದೆ ಎಂದು ಅವರು ಉಲ್ಲೇಖಿಸಿದ್ದಾರೆ. ಇಂಥ ಅಭ್ಯಾಸಗಳು ಶಿಶುಗಳ ಮೆದುಳಿನ ಮೇಲೆ ಆಳವಾದ ಧನಾತ್ಮಕ ಪರಿಣಾಮ ಬೀರುತ್ತವೆ. ನಾಲ್ಕು ತಿಂಗಳ ಗರ್ಭದಲ್ಲಿರುವ ಮಗು ಕೇಳಲು ಪ್ರಾರಂಭಿಸುತ್ತದೆ ಎಂದು ವೈಜ್ಞಾನಿಕವಾಗಿ ಸಾಬೀತಾಗಿದೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…