Advertisement
MIRROR FOCUS

ನಿಗದಿ ಪಡಿಸಿದ ವೇಳೆಯಲ್ಲಿಯೇ ಅನಿಲ ಟ್ಯಾಂಕರ್ ಸಂಚಾರ |ಅಧಿಕಾರಿಗಳ ನಿಗಾಕ್ಕೆ ಜಿಲ್ಲಾಧಿಕಾರಿ ಸೂಚನೆ |

Share

ನಿಗದಿಪಡಿಸಿರುವ (ಹಗಲು) ವೇಳೆಯಲ್ಲಿಯೇ ಅನಿಲ್ ಟ್ಯಾಂಕರುಗಳು ಸಂಚರಿಸುವ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದರು.

ಅವರು ಫೆ.14ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯನ್ನು ಹಾದುಹೋಗುವ ಹೆದ್ದಾರಿಗಳಲ್ಲಿ ಗ್ಯಾಸ್ ಟ್ಯಾಂಕರ್ ಗಳ ಅಸುರಕ್ಷಿತ ಚಾಲನೆ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತದೆ, ಅಲ್ಲದೇ ಅದು ಸಾರ್ವಜನಿಕರ ಸುಗಮ ಸಂಚಾರಕ್ಕೂ ಅನಾನುಕೂಲವಾಗುತ್ತದೆ, ಒಂದು ವೇಳೆ ಅವುಗಳು ಅಪಘಾತಕ್ಕೀಡಾದಲ್ಲಿ ಹೆಚ್ಚಿನ ಅನಾಹುತವು ಸಂಭವಿಸುತ್ತದೆ, ಈ ಕಾರಣಗಳಿಂದಾಗಿ ಗ್ಯಾಸ್ ಟ್ಯಾಂಕರ್ ಗಳ ಚಾಲನೆಗೆ ನಿಗದಿ ಪಡಿಸಿದ ಅವಧಿಯಲ್ಲಿ ಮಾತ್ರ ಅವುಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಎಚ್ಚರಿಸಿದರು.

ಅನಿಲ ಟ್ಯಾಂಕರ್ ಗಳು ಅಪಘಾತಕ್ಕಿಡಾದಾಗ ರಸ್ತೆಗಳು ಹೆಚ್ಚು ಕಾಲ ಬಂದ್ ಆಗಿ, ವಾಹನ ಸಂಚಾರ ತೀವ್ರ ಅಡಚಣೆಯುಂಟಾಗುತ್ತದೆ, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ವಿಪರೀತವಾಗುತ್ತದೆ, ಅಪಘಾತವಾದ ಸಂದರ್ಭದಲ್ಲಿ ಗ್ಯಾಸ್ ಟ್ಯಾಂಕರ್ ಗಳನ್ನು ತೆರವುಗೊಳಿಸಲು ಗ್ಯಾಸ್ ಕಂಪನಿಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಬೇಕು ಎಂಬ ನಿರ್ದೇಶನವನ್ನು ಅವರು ನೀಡಿದರು.

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ಟ್ಯಾಂಕರ್ ಗಳು ರಾತ್ರಿ ಸಂಚರಿಸಬೇಕಾದಲ್ಲೀ ಜಿಪಿಎಸ್‍ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

10 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

10 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

13 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

17 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

17 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago